HomeಮುಖಪುಟMSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

MSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಹರಿಯಾಣ ಹಾಗೂ ಪಂಜಾಬಿನ 6 ರೈತರು ಭಾನುವಾರ ಸಿಂಘು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಡಿಸೆಂಬರ್ 7 ರವರೆಗೆ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ರಾಜೇಂದರ್‌ ಸಿಂಗ್‌ (ಸೋನಿಪತ್‌), ಕರ್ತಾರ್‌ ಸಿಂಗ್‌ (ಕೈತಾಲ್‌), ನರೇಶ್‌ ಸಂಗ್ವಾನ್‌ (ಅಂಬಾಲ), ಸತ್ನಾಮ್‌ ಸಿಂಗ್‌ (ಪಟಿಯಾಲ), ಬಿಕ್ರಮ್‌ ಸಿಂಗ್‌ (ಗುರ್ದಾಸ್‌ಪುರ್‌) ಮತ್ತು ಕುಲ್‌ದೀಪ್‌ ಸಿಂಗ್‌ (ಮೋಗಾ) ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತರು. ಸಿಂಘು ಗಡಿಯಲ್ಲಿ ಸತ್ಯಾಗ್ರಹ ಆರಂಭಿಸಿರುವ ಇವರು ತಮ್ಮನ್ನು ಸರಪಳಿಯಿಂದ ಬಂಧಿಸಿಕೊಂಡಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಜೇಂದರ್‌ ಮಾತನಾಡಿ, ನಮ್ಮ ಬಹುವರ್ಷಗಳ ಬೇಡಿಕೆಯಾದ ಎಂಎಸ್‌ಪಿಗೆ ಕೇಂದ್ರ ಸರ್ಕಾರವು ಕಾನೂನು ಭರವಸೆ ನೀಡುವವರೆಗೆ ತಮ್ಮ ಪ್ರತಿಭಟನೆಯನ್ನು  ಮುಂದುವರೆಸುವುದಾಗಿ ತಿಳಿಸಿದ್ದಾರೆ.

“ಎಂಎಸ್‌ಪಿ ಬಗ್ಗೆ ಚರ್ಚಿಸುವ ಸಲುವಾಗಿ ಕೇಂದ್ರ ಸರ್ಕಾರವು ಸಮಿತಿಯನ್ನು ರಚಿಸಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾ ಕಡೆಯಿಂದ ಐದು ಜನರನ್ನು ಈ ಸಮಿತಿಯಲ್ಲಿರಲು ಹೆಸರು ಸೂಚಿಸುವಂತೆ ಹೇಳಿದೆ. ಇದು ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ನಮ್ಮ ಬೇಡಿಕೆಯನ್ನು ಹೊರಗಿಟ್ಟು  ಆಂದೋಲವನ್ನು ಹಿಂತೆಗೆದುಕೊಳ್ಳುವಂತೆ ಮಾಡುತ್ತಿರುವ ಪ್ರಯತ್ನವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಕಾನೂನು ಭರವಸೆ ನೀಡುವವರೆಗೆ ನಾವು ನಮ್ಮ ದೇಹಗಳನ್ನು ಸರಪಳಿಯಿಂದ ಕಟ್ಟಿಕೊಂಡಿರುವುದನ್ನು ಮುಂದುವರಿಸುತ್ತೇವೆ ಎಂದು ಕುಲ್ದೀಪ್ ಹೇಳಿದ್ದಾರೆ.

ಎಂಎಸ್‌ಪಿ ಕಾನೂನು ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಐದು ಜನರ ಪಟ್ಟಿ ಅಂತಿಮಗೊಳಿಸಿದ್ದಾರೆ.  ರೈತ ಮುಖಂಡರಾದ ಗುರ್ನಮ್ ಸಿಂಗ್ ಚದುನಿ, ಬಲ್ಬೀರ್ ಸಿಂಗ್ ರಾಜೇವಾಲ್, ಯುದ್ಧವೀರ್ ಸಿಂಗ್, ಅಶೋಕ್ ಧವಳೆ ಮತ್ತು ಶಿವಕುಮಾರ್ ಕಕ್ಕಾರವರು ರೈತರನ್ನು ಪ್ರತಿನಿಧಿಸಲಿದ್ದಾರೆ ಎಂದು ಎಸ್‌ಕೆಎಂ ತನ್ನ ಸಭೆಯಲ್ಲಿ ನಿರ್ಧರಿಸಿದೆ.

ರೈತರು ಎಂಎಸ್ಪಿ, ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...