Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...