Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...