Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...