Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...