Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...