Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...