Homeಮುಖಪುಟಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

ಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ ಹಿಮಾಚಲ ಪ್ರದೇಶದ ಆರು ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಇಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಚಿಹ್ನೆಯ ಮೇಲೆ ಸ್ಪರ್ಧಿಸಿದ್ದ ಆರು ಶಾಸಕರು ಪಕ್ಷಾಂತರ ವಿರೋಧಿ ಕಾನೂನಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಮಾಚಲ ಪ್ರದೇಶ ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹರ್ಷವರ್ಧನ್ ಚೌಹಾಣ್ ಅವರು ಅಡ್ಡ ಮತದಾನ ಮಾಡಿದ್ದ ಆರು ಮಂದಿ ಶಾಸಕರನ್ನು ಪಕ್ಷಾಂತರ ವಿರೋಧಿ ಕಾನೂನಡಿ ವಿಧಾನಸಭೆಯಿಂದ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ ಬಳಿಕ ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ತಂಗಿದ್ದ ಆರು ಮಂದಿ ಕಾಂಗ್ರೆಸ್ ಶಾಸಕರು ನಿನ್ನೆ ವಿಧಾನಸಭೆಗೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ಶಾಸಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದರು.

ಸಿಎಂ ಸುಖವಿಂದರ್ ಸಿಂಗ್ ಸುಖು ಬುಧವಾರ ಶಿಮ್ಲಾದಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರನ್ನು ‘ಉಪಹಾರ ಸಭೆ’ಗೆ ಕರೆದಿದ್ದರು. ಈ ಸಭೆಗೆ 6 ಮಂದಿ ಗೈರಾಗಿದ್ದರು ಎಂದು ವರದಿಗಳು ಹೇಳಿವೆ.

ಆರು ಶಾಸಕರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಕಡೆ ವಾಲಿದ್ದರಿಂದ ಹಿಮಾಚಲದ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಒಟ್ಟು 68 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ ಕಾಂಗ್ರೆಸ್ 40 ಸ್ಥಾನಗಳನ್ನು ಹೊಂದಿದೆ. ಬಿಜೆಪಿಯ 25 ಶಾಸಕರಿದ್ದಾರೆ. ಉಳಿದ ಮೂರು ಸ್ಥಾನಗಳಲ್ಲಿ ಸ್ವತಂತ್ರ ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಬಹುಮತಕ್ಕೆ 35 ಶಾಸಕರ ಬೆಂಬಲ ಬೇಕಿದೆ.

ಸ್ಪೀಕರ್ ಕಚೇರಿಯಲ್ಲಿ ಗೊಂದಲ ಸೃಷ್ಟಿಸಿದ್ದಕ್ಕೆ ನಿನ್ನೆಯಷ್ಟೇ 15 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತ್ತುಗೊಳಿಸಲಾಗಿತ್ತು. ಆ ಬಳಿಕ ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಅಂಗೀಕರಿಸಿತ್ತು. ಇದು ಬಿಜೆಪಿ ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

“ಬಿಜೆಪಿ 25 ಶಾಸಕರನ್ನು ಹೊಂದಿದೆ. ರಾಜ್ಯಸಭೆಯ ಮತದಾನದ ನಂತರ ನಮ್ಮ ಬೆಂಬಲಿಗ ಶಾಸಕರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಇದು ಸರ್ಕಾರಕ್ಕೆ ಅಪಾಯವನ್ನುಂಟು ಮಾಡಿದೆ. ಹಾಗಾಗಿ, ಅವರಿಗೆ ಹೇಗಾದರೂ ಮಾಡಿ ಬಜೆಟ್ ಅಂಗೀಕರಿಸಬೇಕಿತ್ತು. ಇಲ್ಲದಿದ್ದರೆ ಸರ್ಕಾರ ಬೀಳುವ ಆತಂಕವಿತ್ತು. ಈ ಕಾರಣಕ್ಕೆ ನಾನು ಸೇರಿದಂತೆ ನಮ್ಮ 15 ಶಾಸಕರನ್ನು ಅಮಾನತು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಉಳಿಸಲು ನಮ್ಮನ್ನು ಅಮಾನತುಗೊಳಿಸಲಾಗಿದೆ. ನಮ್ಮ ಅಮಾನತು ನಂತರ ಅವರು ಬಜೆಟ್ ಅಂಗೀಕರಿಸಿದ್ದಾರೆ” ಎಂದು ಬಿಜೆಪಿ ಮುಖಂಡ ಜೈರಾಮ್ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ನೇತೃತ್ವದ NDA ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...