Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ನಾಳೆ ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ರೈತರ ಕರೆ

ಲಖಿಂಪುರ್‌ ಖೇರಿ ಹತ್ಯಾಕಾಂಡ: ನಾಳೆ ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ರೈತರ ಕರೆ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಎಸ್‌ಕೆಎಂ ಸೋಮವಾರ (ಅ.18)ಕ್ಕೆ ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದೆ.

ಸಚಿವ ಅಜಯ್ ಮಿಶ್ರಾ ತೇನಿಯನ್ನು  ಸಚಿವ ಸ್ಥಾನದಿಂದ ತೆಗೆದುಹಾಕಿ, ತಕ್ಷಣ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸಿದೆ. ಇದೇ ಬೇಡಿಕೆಗಾಗಿ ನಾಳೆ 6 ಗಂಟೆಗಳ ಕಾಲ, ಅಂದರೆ, ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಭಾರತದಾದ್ಯಂತ ರೈಲು ಸಂಚಾರಕ್ಕೆ ತಡೆ ಒಡ್ಡಿ ರೈಲ್ ರೋಕೋ ಚಳವಳಿ ನಡೆಸಲಿದೆ.

ರೈಲ್ ರೋಕೋ ಶಾಂತಿಯುತವಾಗಿರುವಂತೆ ಮತ್ತು ರೈಲ್ವೆ ಆಸ್ತಿಗೆ ಯಾವುದೇ ರೀತಿಯ ಹಾನಿಯಾಗದಂತೆ  ಚಳವಳಿ ಮಾಡಬೇಕು ಎಂದು ಎಸ್‌ಕೆಎಂ ಮನವಿ ಮಾಡಿದೆ. ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

“ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಸಚಿವ ಅಜಯ್ ಮಿಶ್ರಾ ತೇನಿ ಮಗನಾಗಿದ್ದಾರೆ. ಅಜಯ್ ಮಿಶ್ರಾ ಒಕ್ಕೂಟ ಸರ್ಕಾರದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವುದರಿಂದ, ಈ ಪ್ರಕರಣದಲ್ಲಿ ನ್ಯಾಯ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದೆ.

’ಸಚಿವ ಅಜಯ್ ಮಿಶ್ರಾ ತೇನಿ ರೌಡಿ ಶೀಟರ್‌ನಂತೆ ಸಾರ್ವಜನಿಕ ಸಭೆಯಲ್ಲಿ ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ತಮ್ಮ ಭಾಷಣಗಳಲ್ಲಿ ಹಿಂದೂಗಳು ಮತ್ತು ಸಿಖ್ಖರ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಾರೆ. ಶಾಮತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಲು ಅವರ ಕಾರುಗಳನ್ನು ಬಳಸಲಾಗಿದೆ. ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಇವರನ್ನು ಮೊದಲೇ ಬಂಧಿಸಬೇಕಿತ್ತು” ಎಂದು ಹೇಳಿದೆ.

ಅಜಯ್ ಮಿಶ್ರಾ ತೇನಿಯವರನ್ನು ಸಚಿವ ಸ್ಥಾನದಲ್ಲಿ ಮುಂದುವರೆಸುತ್ತಿರುವುದು ಸಂಪುಟಕ್ಕೆ ಅವಮಾನ. ಅವರನ್ನು ಸ್ಥಾನದಿಂದ ವಜಾಗೊಳಿಸಿ, ತಕ್ಷಣ ಬಂಧಿಸಬೇಕು ಎಂದು ಎಸ್‌ಕೆಎಂ ತೀವ್ರವಾಗಿ ಒತ್ತಾಯಿಸಿದೆ.

ಇನ್ನು ಲಖಿಂಪುರ್ ಖೇರಿ ಹತ್ಯಾಕಾಂಡದ ಹುತಾತ್ಮ ರೈತರ ಅಸ್ಥಿ ಯಾತ್ರೆಯೂ ಪ್ರಸ್ತುತ ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಇತರ ಸ್ಥಳಗಳಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ.


ಇದನ್ನೂ ಓದಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...