Homeಮುಖಪುಟನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

- Advertisement -
- Advertisement -

ರಾಮಮಂದಿರದ ನಿರ್ಮಾಣದ ಹೊಣೆ ಹೊತ್ತಿರುವ ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಎರಡು ನಕಲಿ ಚೆಕ್‌ಗಳನನ್ನು ಬಳಸಿ 6 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ. ಮೂರನೇ ನಕಲಿ ಚೆಕ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಈ ವಂಚನೆ ಪತ್ತೆಯಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ದೂರಿನ ಮೇರೆಗೆ ಅಯೋಧ್ಯೆ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಯಾ ಘಾಟ್ ಶಾಖೆಯಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಖ್ಯೆ 39200235062 ಅಡಿಯಲ್ಲಿ ಅಕೌಂಟ್ ಹೊಂದಿದೆ. ಈ ಅಕೌಂಟ್‌ನಿಂದ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ.ಅನಿಲ್ ಮಿಶ್ರಾ ಸಹಿ ಮೂಲಕ ಹಣ ತೆಗೆಯಬಹುದಾಗಿದೆ.

ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಸೆಪ್ಟೆಂಬರ್ 1 ರಂದು 2,50,000 ರೂಗಳನ್ನು ಚೆಕ್ ಸಂಖ್ಯೆ 740799 ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಒಂದು ವಾರದ ನಂತರ ಮತ್ತೆ ಸೆಪ್ಟೆಂಬರ್ 8 ರಂದು 3,50,000 ರೂಗಳನ್ನು ಚೆಕ್ ಸಂಖ್ಯೆ 740800ರ ಮೂಲಕ ಅದೇ ಪಿಎನ್‌ಬಿ ಖಾತೆಗೆ ವರ್ಗಾಯಿಸಲು ಬಳಸಲಾಗಿದೆ. ಈ ಚೆಕ್ ವರ್ಗಾವಣೆಯನ್ನು ಫೋರ್ಜರಿ ಮೂಲಕ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ಸೆಪ್ಟೆಂಬರ್ 9 ರಂದು ಬ್ಯಾಂಕ್ ಆಫ್ ಬರೋಡಾಗೆ 9,86,000 ರೂಗಳನ್ನು ಚೆಕ್ ಸಂಖ್ಯೆ 740798 ಮೂಲಕ ವರ್ಗಾಹಿಸುವಂತೆ ಮನವಿ ಬಂದಿತ್ತು. ಆದರೆ ಈ ಬಾರಿ, ಮೊತ್ತವು ತುಸು ಹೆಚ್ಚಾಗಿದ್ದರಿಂದ, ಚೆಕ್ ಪರಿಶೀಲನೆಗಾಗಿ ಬ್ಯಾಂಕ್ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಕರೆಸಿದಾಗ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ಚಂಪತ್ ರಾಯ್ ಚೆಕ್ ಬುಕ್ ಪರಿಶೀಲಿಸಿದೆರೇ, ಆ ಸಂಖ್ಯೆಯ ಚೆಕ್ ಪ್ರತಿ ಇನ್ನೂ ತನ್ನ ಬಳಿ ಇದೆ ಎಂಬುದು ತಿಳಿದುಬಂದಿದೆ. ತಕ್ಷಣ ಚೆಕ್ ತಡೆ ಹಿಡಿದು, ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರು  ಮೋಸ, ಅಪ್ರಾಮಾಣಿಕತೆ, ಖೋಟಾ ಮತ್ತು ಪ್ರಮುಖ ದಾಖಲೆಗಳ ಕಳ್ಳತನದ ಆರೋಪದ ಮೇಲೆ  ಐಪಿಸಿಯ 419, 420, 467, 468, 471 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

“ನಾವು ಪ್ರಸ್ತುತ ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಪಿಎನ್‌ಬಿಯಲ್ಲಿ ಎರಡು ಚೆಕ್‌ಗಳನ್ನು ಪ್ರಸ್ತುತಪಡಿಸುವ ಮೂಲಕ ರಾಮ್ ಮಂದಿರ ಟ್ರಸ್ಟ್‌ನ ಖಾತೆಯಿಂದ ಮೋಸದಿಂದ ಹಣವನ್ನು ತೆಗೆಯಲಾಗಿದೆ ಎಂದು ಇದುವರೆಗೂ ತಿಳಿದುಬಂದಿದೆ. ಇದನ್ನು ಯಾರು ಮಾಡಿದ್ದಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಬ್ಯಾಂಕ್ ಶಾಖೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ” ಎಂದು ಸಿಒ ರಾಜೇಶ್ ಕುಮಾರ್ ರೈ ತಿಳಿಸಿದರು.

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ಇತ್ತ ಚಂಪತ್ ರಾಯ್, ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ವಿಶ್ವಾಸವಿದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳಾಗದಂತೆ ಟ್ರಸ್ಟ್ ಗಮನಹರಿಸಲಿದೆ ಎಂದಿದ್ದಾರೆ.


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...