Homeಮುಖಪುಟನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

- Advertisement -
- Advertisement -

ರಾಮಮಂದಿರದ ನಿರ್ಮಾಣದ ಹೊಣೆ ಹೊತ್ತಿರುವ ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಎರಡು ನಕಲಿ ಚೆಕ್‌ಗಳನನ್ನು ಬಳಸಿ 6 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ. ಮೂರನೇ ನಕಲಿ ಚೆಕ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಈ ವಂಚನೆ ಪತ್ತೆಯಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ದೂರಿನ ಮೇರೆಗೆ ಅಯೋಧ್ಯೆ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಯಾ ಘಾಟ್ ಶಾಖೆಯಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಖ್ಯೆ 39200235062 ಅಡಿಯಲ್ಲಿ ಅಕೌಂಟ್ ಹೊಂದಿದೆ. ಈ ಅಕೌಂಟ್‌ನಿಂದ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ.ಅನಿಲ್ ಮಿಶ್ರಾ ಸಹಿ ಮೂಲಕ ಹಣ ತೆಗೆಯಬಹುದಾಗಿದೆ.

ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಸೆಪ್ಟೆಂಬರ್ 1 ರಂದು 2,50,000 ರೂಗಳನ್ನು ಚೆಕ್ ಸಂಖ್ಯೆ 740799 ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಒಂದು ವಾರದ ನಂತರ ಮತ್ತೆ ಸೆಪ್ಟೆಂಬರ್ 8 ರಂದು 3,50,000 ರೂಗಳನ್ನು ಚೆಕ್ ಸಂಖ್ಯೆ 740800ರ ಮೂಲಕ ಅದೇ ಪಿಎನ್‌ಬಿ ಖಾತೆಗೆ ವರ್ಗಾಯಿಸಲು ಬಳಸಲಾಗಿದೆ. ಈ ಚೆಕ್ ವರ್ಗಾವಣೆಯನ್ನು ಫೋರ್ಜರಿ ಮೂಲಕ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ಸೆಪ್ಟೆಂಬರ್ 9 ರಂದು ಬ್ಯಾಂಕ್ ಆಫ್ ಬರೋಡಾಗೆ 9,86,000 ರೂಗಳನ್ನು ಚೆಕ್ ಸಂಖ್ಯೆ 740798 ಮೂಲಕ ವರ್ಗಾಹಿಸುವಂತೆ ಮನವಿ ಬಂದಿತ್ತು. ಆದರೆ ಈ ಬಾರಿ, ಮೊತ್ತವು ತುಸು ಹೆಚ್ಚಾಗಿದ್ದರಿಂದ, ಚೆಕ್ ಪರಿಶೀಲನೆಗಾಗಿ ಬ್ಯಾಂಕ್ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಕರೆಸಿದಾಗ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ಚಂಪತ್ ರಾಯ್ ಚೆಕ್ ಬುಕ್ ಪರಿಶೀಲಿಸಿದೆರೇ, ಆ ಸಂಖ್ಯೆಯ ಚೆಕ್ ಪ್ರತಿ ಇನ್ನೂ ತನ್ನ ಬಳಿ ಇದೆ ಎಂಬುದು ತಿಳಿದುಬಂದಿದೆ. ತಕ್ಷಣ ಚೆಕ್ ತಡೆ ಹಿಡಿದು, ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರು  ಮೋಸ, ಅಪ್ರಾಮಾಣಿಕತೆ, ಖೋಟಾ ಮತ್ತು ಪ್ರಮುಖ ದಾಖಲೆಗಳ ಕಳ್ಳತನದ ಆರೋಪದ ಮೇಲೆ  ಐಪಿಸಿಯ 419, 420, 467, 468, 471 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

“ನಾವು ಪ್ರಸ್ತುತ ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಪಿಎನ್‌ಬಿಯಲ್ಲಿ ಎರಡು ಚೆಕ್‌ಗಳನ್ನು ಪ್ರಸ್ತುತಪಡಿಸುವ ಮೂಲಕ ರಾಮ್ ಮಂದಿರ ಟ್ರಸ್ಟ್‌ನ ಖಾತೆಯಿಂದ ಮೋಸದಿಂದ ಹಣವನ್ನು ತೆಗೆಯಲಾಗಿದೆ ಎಂದು ಇದುವರೆಗೂ ತಿಳಿದುಬಂದಿದೆ. ಇದನ್ನು ಯಾರು ಮಾಡಿದ್ದಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಬ್ಯಾಂಕ್ ಶಾಖೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ” ಎಂದು ಸಿಒ ರಾಜೇಶ್ ಕುಮಾರ್ ರೈ ತಿಳಿಸಿದರು.

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ಇತ್ತ ಚಂಪತ್ ರಾಯ್, ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ವಿಶ್ವಾಸವಿದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳಾಗದಂತೆ ಟ್ರಸ್ಟ್ ಗಮನಹರಿಸಲಿದೆ ಎಂದಿದ್ದಾರೆ.


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...