Homeಮುಖಪುಟನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

- Advertisement -
- Advertisement -

ರಾಮಮಂದಿರದ ನಿರ್ಮಾಣದ ಹೊಣೆ ಹೊತ್ತಿರುವ ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಎರಡು ನಕಲಿ ಚೆಕ್‌ಗಳನನ್ನು ಬಳಸಿ 6 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ. ಮೂರನೇ ನಕಲಿ ಚೆಕ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಈ ವಂಚನೆ ಪತ್ತೆಯಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ದೂರಿನ ಮೇರೆಗೆ ಅಯೋಧ್ಯೆ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಯಾ ಘಾಟ್ ಶಾಖೆಯಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಖ್ಯೆ 39200235062 ಅಡಿಯಲ್ಲಿ ಅಕೌಂಟ್ ಹೊಂದಿದೆ. ಈ ಅಕೌಂಟ್‌ನಿಂದ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ.ಅನಿಲ್ ಮಿಶ್ರಾ ಸಹಿ ಮೂಲಕ ಹಣ ತೆಗೆಯಬಹುದಾಗಿದೆ.

ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಸೆಪ್ಟೆಂಬರ್ 1 ರಂದು 2,50,000 ರೂಗಳನ್ನು ಚೆಕ್ ಸಂಖ್ಯೆ 740799 ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಒಂದು ವಾರದ ನಂತರ ಮತ್ತೆ ಸೆಪ್ಟೆಂಬರ್ 8 ರಂದು 3,50,000 ರೂಗಳನ್ನು ಚೆಕ್ ಸಂಖ್ಯೆ 740800ರ ಮೂಲಕ ಅದೇ ಪಿಎನ್‌ಬಿ ಖಾತೆಗೆ ವರ್ಗಾಯಿಸಲು ಬಳಸಲಾಗಿದೆ. ಈ ಚೆಕ್ ವರ್ಗಾವಣೆಯನ್ನು ಫೋರ್ಜರಿ ಮೂಲಕ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ಸೆಪ್ಟೆಂಬರ್ 9 ರಂದು ಬ್ಯಾಂಕ್ ಆಫ್ ಬರೋಡಾಗೆ 9,86,000 ರೂಗಳನ್ನು ಚೆಕ್ ಸಂಖ್ಯೆ 740798 ಮೂಲಕ ವರ್ಗಾಹಿಸುವಂತೆ ಮನವಿ ಬಂದಿತ್ತು. ಆದರೆ ಈ ಬಾರಿ, ಮೊತ್ತವು ತುಸು ಹೆಚ್ಚಾಗಿದ್ದರಿಂದ, ಚೆಕ್ ಪರಿಶೀಲನೆಗಾಗಿ ಬ್ಯಾಂಕ್ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಕರೆಸಿದಾಗ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ಚಂಪತ್ ರಾಯ್ ಚೆಕ್ ಬುಕ್ ಪರಿಶೀಲಿಸಿದೆರೇ, ಆ ಸಂಖ್ಯೆಯ ಚೆಕ್ ಪ್ರತಿ ಇನ್ನೂ ತನ್ನ ಬಳಿ ಇದೆ ಎಂಬುದು ತಿಳಿದುಬಂದಿದೆ. ತಕ್ಷಣ ಚೆಕ್ ತಡೆ ಹಿಡಿದು, ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರು  ಮೋಸ, ಅಪ್ರಾಮಾಣಿಕತೆ, ಖೋಟಾ ಮತ್ತು ಪ್ರಮುಖ ದಾಖಲೆಗಳ ಕಳ್ಳತನದ ಆರೋಪದ ಮೇಲೆ  ಐಪಿಸಿಯ 419, 420, 467, 468, 471 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

“ನಾವು ಪ್ರಸ್ತುತ ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಪಿಎನ್‌ಬಿಯಲ್ಲಿ ಎರಡು ಚೆಕ್‌ಗಳನ್ನು ಪ್ರಸ್ತುತಪಡಿಸುವ ಮೂಲಕ ರಾಮ್ ಮಂದಿರ ಟ್ರಸ್ಟ್‌ನ ಖಾತೆಯಿಂದ ಮೋಸದಿಂದ ಹಣವನ್ನು ತೆಗೆಯಲಾಗಿದೆ ಎಂದು ಇದುವರೆಗೂ ತಿಳಿದುಬಂದಿದೆ. ಇದನ್ನು ಯಾರು ಮಾಡಿದ್ದಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಬ್ಯಾಂಕ್ ಶಾಖೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ” ಎಂದು ಸಿಒ ರಾಜೇಶ್ ಕುಮಾರ್ ರೈ ತಿಳಿಸಿದರು.

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ಇತ್ತ ಚಂಪತ್ ರಾಯ್, ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ವಿಶ್ವಾಸವಿದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳಾಗದಂತೆ ಟ್ರಸ್ಟ್ ಗಮನಹರಿಸಲಿದೆ ಎಂದಿದ್ದಾರೆ.


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...