- Advertisement -
- Advertisement -
ರಾಮ ಜನ್ಮಭೂಮಿ ಟ್ರಸ್ಟ್ನಲ್ಲಿ 6 ಲಕ್ಷ ರೂ.ಗಳ ದುರುಪಯೋಗವಾಗಿರುವುದು ಬೆಳಗಿಗೆ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿದೆ.
ಈ ಕುರಿತು, ಅಯೋಧ್ಯೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ದೀಪಕ್ ಕುಮಾರ್ ಮಾತನಾಡಿ, “ಸೆಪ್ಟೆಂಬರ್ 9 ರಂದು ರಾಮ ಜನ್ಮಭೂಮಿ ಟ್ರಸ್ಟ್ನಿಂದ 6 ಲಕ್ಷ ರೂ.ಗಳನ್ನು ವಂಚಿಸಿದ ಪ್ರಕರಣ ಈಗ ಬಹಿರಂಗವಾಗಿದೆ” ಎಂದು ಹೇಳಿದರು.
“ಈ ಪ್ರಕರಣವನ್ನು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ದಾಖಲಿಸಿದ್ದಾರೆ. ಎಎಸ್ಪಿ ನೇತೃತ್ವದ ತಂಡವು ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರನ್ನು ಬಂಧಿಸಿದೆ. ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದ್ದಾರೆ ಎಂಬುದಾಗಿ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ