Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...