Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....