Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...