Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...