Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...