Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...