Homeಕರ್ನಾಟಕಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಇಂದು ಆರು ಜನ ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಮರಳಿದ್ದು, ‘ಶಾಂತಿಗಾಗಿ ನಾಗರಿಕರ ವೇದಿಕೆ’ ಮುಖಂಡರ ಶ್ರಮ ಸಾರ್ಥಕವಾಗಿದೆ.

ಕಳೆದ ವರ್ಷ, ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ಬಳಿಕ ಉಳಿದ ಹೋರಾಟಗಾರರ ಜೀವ ಉಳಿಸಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದರು. ದಲಿತರು, ಆದಿವಾದಿಗಳು ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡುತ್ತಿರುವವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಡ ಹಾಕಿದ್ದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುತ್ಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಲಿ (ಕರ್ನಾಟಕ), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಮುಖ್ಯವಾಹಿನಿಗೆ ಮರಳಿದ್ದಾರೆ.

ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಲೋಕ್ ಮೋಹನ್, ಶಾಂತಿಗಾಗಿ ನಾಗರಿಕರ ವೇದಿಕೆ ಮುಖಂಡರು, ಶರಣಾಗುತ್ತಿರುವ ನಕ್ಸಲ್ ನಾಯಕರ ಕುಟುಂಬದ ಸದಸ್ಯರು ಇದ್ದರು.

ಗೃಹ ಸಚಿವ ಜಿ. ಪರಮೇಶ್ವರ ಮಾತನಾಡಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡುವ ಯೋಜನೆ ಭಾಗವಾಗಿ ಆರು ಜನರು ಮುಖ್ಯವಾಹಿನಿಗೆ ಬಂದಿದ್ದಾರೆ. ಶರಣಾಗತಿ ಸಮಿತಿ ಸದಸ್ಯರೂ ಜೊತೆಯಲ್ಲಿ ಇದ್ದಾರೆ. ಈ ಬಗ್ಗೆ ಕೆಲಸ ಮಾಡಿರುವ ಪೊಲೀಸ್ ಅಧಿಕಾರಿಗಳು ಇದ್ದಾರೆ. ಮುಖ್ಯಮಂತ್ರಿಗಳ ಕರೆಗೆ ಆರು ಜನ ಹೋರಾಟಗಾರರು ಸ್ಪಂದಿಸಿ ಶರಣಾಗಿದ್ದಾರೆ ಎಂದರು.

ಮುಖ್ಯಮಂತ್ರಿಗಳಿಂದ ಸಂವಿಧಾನ ಪ್ರತಿ ಸ್ವೀಕರಿಸಿ ಮತನಾಡಿದ ಮುಂಡುಗಾರು ಲತಾ, “ಮುಖ್ಯವಾಹಿನಿಗೆ ಬಂದಿರುವ ನಮಗೆ ಮುಖ್ಯಮಂತ್ರಿಗಳು ಗೌರವ ನೀಡಿದ್ದಾರೆ. ನಾವೂ ಕೂಡ ಅವರನ್ನು ಅಭಿನಂದಿಸುತ್ತೇವೆ. ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಟ್ಟಿದ್ದೇವೆ. ಇನ್ನು ಮುಂದೆ ಕಾನೂನು ಬದ್ದವಾಗಿ ಹಾಗೂ ಸಂವಿಧಾನಬದ್ಧವಾಗಿ ಜನರ ಪರವಾಗಿ ಹೋರಾಟ ಮುಂದುವರಿಸುತ್ತೇವೆ. ನಾವೀಗ ಪರಿವರ್ತನೆಯಾಗಿದ್ದು, ನಕ್ಸಲ್ ಹೋರಾಟವನ್ನು ಬಿಟ್ಟು ಬಂದಿದಿದ್ದೇವೆ” ಎಂದರು.

ಶಾಂತಿಗಾಗಿ ನಾಗರಿಕರ ವೇದಿಕೆ ಮುಖಂಡರಾದ ಡಾ. ಬಂಜಗೆರೆ ಜಯಪ್ರಕಾಶ್ ಮಾತನಾಡಿ, “ಮುಖ್ಯವಾಹಿನಿಗೆ ಮರಳಿದ ನಕ್ಸಲ್ ಹೋರಾಟಗಾರರಿಗೆ ಪುನರ್ವಸತಿ ಯೋಜನೆಯನ್ನು ಮುಖ್ಯಮಂತ್ರಿಗಳು ಕಲ್ಪಿಸಿದ್ದಾರೆ. ಇಡೀ ಸರ್ಕಾರ ಹಾಗೂ ಅಧಿಕಾರಿ ವರ್ಗ ಸಕಾಲಕ್ಕೆ ಸ್ಪಂಧಿಸಿದ್ದು, ನಕ್ಸಲರು ಮುಖ್ಯವಾಹಿನಿಗೆ ಬರಲು ಶ್ರಮಿಸಿದ್ದಾರೆ. ಸಶಸ್ತ್ರ ಪಡೆಯ ಕಟ್ಟಕಡೆಯ ತಂಡ ಇಂದು ಮುಖ್ಯವಾಹಿನಿಗೆ ಬಂದಿದೆ. ನಮ್ಮ ವೇದಿಕೆ ಪರವಾಗಿ ಸರ್ಕಾರಕ್ಕೆ ಅಭಿನಂದಿಸುತ್ತೇವೆ” ಎಂದರು.

ಆರು ಜನರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರನ್ನು ಸ್ವಾಗತಿಸಲು ನಿರ್ಧರಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ತಾವೇ ಸ್ವಾಗತಿಸುವುದಾಗಿ ತಿಳಿಸಿದ್ದರಿಂದ, ಕಾರ್ಯಕ್ರಮವನ್ನು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.

ಇದನ್ನೂ ಒದಿ; ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...