Homeಚಳವಳಿ6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ - ಕಾರ್ಮಿಕರ ಹೋರಾಟಕ್ಕೆ ಗೆಲುವು

6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

- Advertisement -
- Advertisement -

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಕಂಪನಿಯ ಸ್ಥಾವರದಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಾಯಿಸಲು ಮದ್ರಾಸ್ ಹೈಕೋರ್ಟ್ ಡಿಸೆಂಬರ್ 5 ಗುರುವಾರ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ. 6 ವಾರಗಳಲ್ಲಿ ಸ್ಯಾಮ್‌ಸಂಗ್

ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ನೇತೃತ್ವದ ಪೀಠವು ಜೂನ್‌ನಲ್ಲಿ ಸಲ್ಲಿಸಿದ ಅರ್ಜಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಟ್ರೇಡ್ ಯೂನಿಯನ್‌ಗಳ ರಿಜಿಸ್ಟ್ರಾರ್‌ಗೆ ಸೂಚಿಸಿದೆ. ಕಾನೂನಿನ ಪ್ರಕಾರ, ಕಾರ್ಮಿಕ ಇಲಾಖೆಗೆ ಅರ್ಜಿಯನ್ನು ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕಿದೆ. 6 ವಾರಗಳಲ್ಲಿ ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ ಘಟಕದ 1,200 ಕ್ಕೂ ಹೆಚ್ಚು ಕಾರ್ಮಿಕರು ಹಲವು ತಿಂಗಳಿನಿಂದ ಉತ್ತಮ ವೇತನ, ಕೆಲಸದ ಪರಿಸ್ಥಿತಿಗಳು ಮತ್ತು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಗೆ ಸಂಯೋಜಿತವಾದ ಕಾರ್ಮಿಕ ಒಕ್ಕೂಟದ ಮಾನ್ಯತೆಗಾಗಿ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ. ಕಾರ್ಮಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪ್ರತಿಭಟನಾಕಾರರನ್ನು ಬಂಧಿಸಲು ಭಾರೀ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯೂನಿಯನ್ ನೋಂದಣಿಯನ್ನು ವಿಳಂಬ ಮಾಡಿದ್ದಕ್ಕಾಗಿ ತಮಿಳುನಾಡು ಸರ್ಕಾರದ ಕಾರ್ಮಿಕ ಇಲಾಖೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಎಸ್‌ಐಡಬ್ಲ್ಯೂಯು ಪ್ರಧಾನ ಕಾರ್ಯದರ್ಶಿ ಪಿ. ಎಲ್ಲನ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸ್ಯಾಮ್‌ಸಂಗ್ ಇಂಡಿಯಾ ಇಂಪ್ಲೀಡಿಂಗ್ ಅರ್ಜಿಯನ್ನು ಸಲ್ಲಿಸಿತ್ತು.

ಸ್ಯಾಮ್‌ಸಂಗ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಆರ್. ರಾಜಗೋಪಾಲ್, ಕಂಪನಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

“ಸ್ಯಾಮ್‌ಸಂಗ್ ಅಂತರಾಷ್ಟ್ರೀಯ ಕಂಪನಿಯಾಗಿದೆ. ಕಾರ್ಮಿಕರು ಒಕ್ಕೂಟವನ್ನು ನೋಂದಾಯಿಸುವ ಹಕ್ಕನ್ನು ಹೊಂದಿದ್ದಾರೆ ಆದರೆ Samsung ಹೆಸರನ್ನು ಬಳಸುವ ಮೂಲಭೂತ ಹಕ್ಕು ಅವರಿಗೆ ಇಲ್ಲ. ಅವರ ಮುಷ್ಕರದಿಂದ ನಮಗೆ 100 ಮಿಲಿಯನ್ ಡಾಲರ್ ನಷ್ಟ ಉಂಟಾಗಿದೆ” ಎಂದು ಅವರು ಹೇಳಿದ್ದಾರೆ.

ಗುರುವಾರ ಮತ್ತೆ ಅರ್ಜಿಯನ್ನು ಆಲಿಸಿದ ಮದ್ರಾಸ್ ಹೈಕೋರ್ಟ್, ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ ಆದೇಶವನ್ನು ಹೊರಡಿಸುವುದು ಟ್ರೇಡ್ ಯೂನಿಯನ್/ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರ ಶಾಸನಬದ್ಧ ಕರ್ತವ್ಯವಾಗಿದೆ ಎಂದು ಹೇಳಿದೆ.

ಕಾರ್ಮಿಕರ ಜೊತೆಗೆ ನಡೆಸಿದ ಹಲವಾರು ಸುತ್ತಿನ ಚರ್ಚೆಯ ನಂತರ, ತಮಿಳುನಾಡು ಸರ್ಕಾರವು ಯೂನಿಯನ್ ಅನ್ನು ಗುರುತಿಸಲಾಗುವುದು ಎಂದು ಕಾರ್ಮಿಕರಿಗೆ ಭರವಸೆ ನೀಡಿತ್ತು ಮತ್ತು ಅಕ್ಟೋಬರ್ 16 ರಂದು ಮುಷ್ಕರವನ್ನು ಹಿಂತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...