Homeಚಳವಳಿ6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ - ಕಾರ್ಮಿಕರ ಹೋರಾಟಕ್ಕೆ ಗೆಲುವು

6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

- Advertisement -
- Advertisement -

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಕಂಪನಿಯ ಸ್ಥಾವರದಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಾಯಿಸಲು ಮದ್ರಾಸ್ ಹೈಕೋರ್ಟ್ ಡಿಸೆಂಬರ್ 5 ಗುರುವಾರ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ. 6 ವಾರಗಳಲ್ಲಿ ಸ್ಯಾಮ್‌ಸಂಗ್

ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ನೇತೃತ್ವದ ಪೀಠವು ಜೂನ್‌ನಲ್ಲಿ ಸಲ್ಲಿಸಿದ ಅರ್ಜಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಟ್ರೇಡ್ ಯೂನಿಯನ್‌ಗಳ ರಿಜಿಸ್ಟ್ರಾರ್‌ಗೆ ಸೂಚಿಸಿದೆ. ಕಾನೂನಿನ ಪ್ರಕಾರ, ಕಾರ್ಮಿಕ ಇಲಾಖೆಗೆ ಅರ್ಜಿಯನ್ನು ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕಿದೆ. 6 ವಾರಗಳಲ್ಲಿ ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ ಘಟಕದ 1,200 ಕ್ಕೂ ಹೆಚ್ಚು ಕಾರ್ಮಿಕರು ಹಲವು ತಿಂಗಳಿನಿಂದ ಉತ್ತಮ ವೇತನ, ಕೆಲಸದ ಪರಿಸ್ಥಿತಿಗಳು ಮತ್ತು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಗೆ ಸಂಯೋಜಿತವಾದ ಕಾರ್ಮಿಕ ಒಕ್ಕೂಟದ ಮಾನ್ಯತೆಗಾಗಿ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ. ಕಾರ್ಮಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪ್ರತಿಭಟನಾಕಾರರನ್ನು ಬಂಧಿಸಲು ಭಾರೀ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯೂನಿಯನ್ ನೋಂದಣಿಯನ್ನು ವಿಳಂಬ ಮಾಡಿದ್ದಕ್ಕಾಗಿ ತಮಿಳುನಾಡು ಸರ್ಕಾರದ ಕಾರ್ಮಿಕ ಇಲಾಖೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಎಸ್‌ಐಡಬ್ಲ್ಯೂಯು ಪ್ರಧಾನ ಕಾರ್ಯದರ್ಶಿ ಪಿ. ಎಲ್ಲನ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸ್ಯಾಮ್‌ಸಂಗ್ ಇಂಡಿಯಾ ಇಂಪ್ಲೀಡಿಂಗ್ ಅರ್ಜಿಯನ್ನು ಸಲ್ಲಿಸಿತ್ತು.

ಸ್ಯಾಮ್‌ಸಂಗ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಆರ್. ರಾಜಗೋಪಾಲ್, ಕಂಪನಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

“ಸ್ಯಾಮ್‌ಸಂಗ್ ಅಂತರಾಷ್ಟ್ರೀಯ ಕಂಪನಿಯಾಗಿದೆ. ಕಾರ್ಮಿಕರು ಒಕ್ಕೂಟವನ್ನು ನೋಂದಾಯಿಸುವ ಹಕ್ಕನ್ನು ಹೊಂದಿದ್ದಾರೆ ಆದರೆ Samsung ಹೆಸರನ್ನು ಬಳಸುವ ಮೂಲಭೂತ ಹಕ್ಕು ಅವರಿಗೆ ಇಲ್ಲ. ಅವರ ಮುಷ್ಕರದಿಂದ ನಮಗೆ 100 ಮಿಲಿಯನ್ ಡಾಲರ್ ನಷ್ಟ ಉಂಟಾಗಿದೆ” ಎಂದು ಅವರು ಹೇಳಿದ್ದಾರೆ.

ಗುರುವಾರ ಮತ್ತೆ ಅರ್ಜಿಯನ್ನು ಆಲಿಸಿದ ಮದ್ರಾಸ್ ಹೈಕೋರ್ಟ್, ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ ಆದೇಶವನ್ನು ಹೊರಡಿಸುವುದು ಟ್ರೇಡ್ ಯೂನಿಯನ್/ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರ ಶಾಸನಬದ್ಧ ಕರ್ತವ್ಯವಾಗಿದೆ ಎಂದು ಹೇಳಿದೆ.

ಕಾರ್ಮಿಕರ ಜೊತೆಗೆ ನಡೆಸಿದ ಹಲವಾರು ಸುತ್ತಿನ ಚರ್ಚೆಯ ನಂತರ, ತಮಿಳುನಾಡು ಸರ್ಕಾರವು ಯೂನಿಯನ್ ಅನ್ನು ಗುರುತಿಸಲಾಗುವುದು ಎಂದು ಕಾರ್ಮಿಕರಿಗೆ ಭರವಸೆ ನೀಡಿತ್ತು ಮತ್ತು ಅಕ್ಟೋಬರ್ 16 ರಂದು ಮುಷ್ಕರವನ್ನು ಹಿಂತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...