Homeಮುಖಪುಟಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

- Advertisement -
- Advertisement -

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

ನೀವು ಎಂದಾದರೂ ಈ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯಲ್ಲಿ ಈ ದೇಶದ ಸಂಕಷ್ಟಗಳ ಬಗ್ಗೆ ಮಾತಾಡಿದ್ದನ್ನು ಕೇಳಿದ್ದೀರಾ? ಅದಿರಲಿ, ಈ ದಾಖಲೆವೀರ ಕ್ರಿಕೆಟಿಗ ಕಲಾಪಗಳಿಗೆ ಹಾಜರಾದದ್ದೇ ಅಪರೂಪ. ಇಂತಹ ಸಚಿನ್ ಕೂಡ ಬರ್ನಿಂಗ್ ಇಶ್ಯೂ ಮೇಲೆ ಟ್ವೀಟ್ ಮಾಡಬೇಕಾಯಿತು!

ಇನ್ನು ಈ ಅಕ್ಷಯಕುಮಾರ್, ಸುನೀಲ್ ಶೆಟ್ಟಿ, ಅಜಯ್ ದೇವಗನ್ ತಮ್ಮ ಸಿನಿಮಾಗಳಲ್ಲಿ ಕೂಡ ರೈತರ ಇಶ್ಯೂ ಹೈಲೈಟ್ ಮಾಡಿದ್ದೆ ಇಲ್ಲ. ಈ ಮೂವರ ಸಿನಿಮಾಗಳ ತಿರುಳುಗಳೂ ಒಂದೇ, ಅಷ್ಟೇ ಕಳಪೆ. ಅಕ್ಷಯಕುಮಾರ್ ಈಗಾಗಲೆ ಬಿಜೆಪಿಯ ’ಪೋಸ್ಟರ್ ಬಾಯ್’ ಎಂಬ ಬಿರುದನ್ನು ಆನಂದಿಸುತ್ತಿರುವ ಮನುಷ್ಯ. ಸೇನೆ, ಧ್ವಜ ಕೆಲವೊಮ್ಮೆ ಪಂಜಾಬಿ ಅಸ್ಮಿತೆಯ ಕಥಾನಕಗಳ ಮೇಲೆ ವರ್ಷಕ್ಕೊಂದು ಬಿಗ್ ಬಜೆಟ್ ಸಿನಿಮಾ ಮಾಡಿ ಅಸ್ತಿತ್ವ ಉಳಿಸಿಕೊಂಡಿರುವ ಸ್ಟಾರ್. ಈತನೂ ಈಗ ರೈತರ ಪರ ಎನ್ನುವಂತೆ, ಸರ್ಕಾರ ಸಮಸ್ಯೆ ಬಗೆಹರಿಸುತ್ತಿದೆ ಎನ್ನುವಂತೆ ಟ್ವೀಟ್ ಮಾಡಿದ್ದಾನೆ. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಅಜಯ್ ದೇವಗನ್ ಮತ್ತು ಸುನೀಲ್ ಶೆಟ್ಟಿ ಈಗ ಸಿನಿಮಾ ನಿರ್ಮಿಸಬಹುದೇ ಹೊರತು ಅವರೇ ಅಭಿನಯಿಸಿದರೆ ಪುಟ್ಟಾಪೂರಾ ಲಾಸ್ ಪಕ್ಕಾ. ’ವಿಮಲ್’ ಎಂಬ ಗುಟ್ಕಾದ ’ರಾಯಭಾರಿ’ ಆಗಿಯಷ್ಟೇ ’ಕೇಸರಿ’ ಸ್ವಾದದ ಬಗ್ಗೆ ಮಾತನಾಡುವ ಅಜಯ್ ದೇವಗನ್, ಮೊದಲ ಸಲ ’ಕೇಸರಿ’ ಪಡೆಯ ಪರವಾಗಿ ಒಂದು ಟ್ವೀಟನ್ನೂ ಮಾಡಬೇಕಾಗಿತು. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಭಾರತದ ಶ್ರೀಮಂತ ಅವಿಭಕ್ತ ಕುಟುಂಬಗಳು, ಎನ್‌ಆರ್‌ಐಗಳ ಕತೆ-ಚಿತ್ರಕತೆಗಳ ನಿರ್ದೇಶನಕ್ಕೆ ಸಿಮೀತರಾದ ಕರಣ್ ಜೋಹರ್ ಕೂಡ ಭಾರತದ ಒಗ್ಗಟ್ಟಿನ ಕುರಿತು ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಮಗುವಿನ ಸಂಭ್ರಮದಲ್ಲಿದ್ದರೆಂದು ಕಾಣುತ್ತದೆ. ಡೌನ್ ಆರ್ಡರ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ ಸ್ವಲ್ಪ ತಡವಾಗಿ ಇಂತದ್ದೊಂದು ಟ್ವೀಟ್ ಬೌಂಡರಿ ಬೀಸಿದ್ದಾರೆ.

ಗೌತಮ್ ಗಂಭೀರ್ ಈ ಬಗ್ಗೆ ಟ್ವೀಟ್ ಮಾಡಿಲ್ಲ ಅಂತಾ ಕಾಣುತ್ತೆ. ಮೋಸ್ಟ್ಲಿ, ಅವರು ಗಣರಾಜ್ಯ ದಿನದ ಗಲಾಟೆಗೆ ಆಪ್ ಕಾರಣ ಎಂಬ ತಮ್ಮ ಸಂಶೋಧನೆಗೆ ಸಾಕ್ಷ್ಯ ಕಲೆ ಹಾಕುತ್ತಿರಬಹುದು.

ಹೀಗೆ ಇವರೆಲ್ಲ ಒಮ್ಮಿಂದೊಮ್ಮೆಲೆ ತಮ್ಮ ಐಷಾರಾಮಿ ಮಂಪರಿನಿಂದ ಹೊರಬರಲು ರಿಹಾನ್ನಾಳ ಆರು ಪದಗಳ ಟ್ವೀಟ್ ಪುಟಿ ಪುಟಿದು, ಆಕೆಯ ಹಾಡಿನಂತೆ ತೇಲಿ ತೇಲಿ ಬರಬೇಕಾಯಿತು. ಅಷ್ಟಕ್ಕೂ ಇವರೇನೂ ತಾವಾಗಿಯೇ ಟ್ವೀಟ್ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿಯ ಇವರ ’ಉನ್ನತ’ ಹಿತೈಷಿಗಳಿಂದ ಅರ್ಜೆಂಟ್ ಕಾಲ್ ಬಂದ ನಂತರವಷ್ಟೇ ಒಂದು ಟ್ವೀಟ್ ಮಾಡಿ ಮತ್ತೆ ಎಂದಿನಂತೆ ತಮ್ಮ ಮಂಪರಿಗೆ ಜಾರಿದ್ದಾರೆ.

ಹಾಗೆ ನೋಡಿದರೆ, ಬಿಜೆಪಿಯ ಹೊಸ ’ಪೋಸ್ಟರ್ ಗರ್ಲ್’ ಕಂಗನಾ ರಾಣಾವತ್ ಅವರೇ ವಾಸಿ. ಈ ’ಹುಡುಗಿ’ ಸ್ಪಾಂಟೆನಿಯಸ್ ಆಗಿ ರಿಹಾನ್ನಾಗೆ ನೇರಾನೇರ ಪ್ರಶ್ನೆ ಮಾಡಿತ್ತು. ’ರೈತರಲ್ಲ, ಅವರು ಭಯೋತ್ಪಾದಕರು. ಚೀನಾ ಇದರ ಹಿಂದೆ ಇದೆ. ಭಾರತವನ್ನು ದುರ್ಬಲಗೊಳಿಸಿ, ಭಾರತವನ್ನು ತನ್ನ ವಸಾಹತುವನ್ನಾಗಿ ಮಾಡಿಕೊಳ್ಳುವ ಹುನ್ನಾರ ಇಲ್ಲಿದೆ’ ಎಂಬ ಹೊಸ some-ಶೋಧನೆಯನ್ನು ಈ ಚಂದುಳ್ಳಿ ’ಅಂಧಭಕ್ತೆ’ ಮಾಡಿದೆ. ಬಹುಸಮಯ ಪಾಕಿಸ್ತಾನದ ಸುತ್ತಲೆ ಗಿರಕಿ ಹೊಡೆಯುವ sum-ಶೋಧಕ ಅಮಿತ್ ಮಾಳವಿಯನಿಗೆ ಈ ’ಹುಡುಗಿಯನ್ನು’ ನೋಡಿ ನಾಚಿಕೆಯಾಗಬೇಕು!

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಶಾ ಕೂಡ ಫೀಲ್ಡಿಗೆ!

ಬಂಪರ್ ಬಜೆಟ್ ತಯಾರಿಸಿ ಸುಸ್ತಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ, ’ಒನ್ಸ್ ಇನ್ ಎ ಸೆಂಚುರಿ’ ಬಜೆಟ್ ಎಂಬ ಅದಾನಿಯ ಟ್ವೀಟೇ ಟಾನಿಕ್ ಆಗಿ ಒದಗಿ ಬಂದು ಚೇತರಿಕೆ ಕಂಡಿದ್ದರು. ಅವರೂ ಒಂದು ಟ್ವೀಟ್ ಮಾಡಿಯೇ ಬಿಟ್ಟರು. ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಕಿಶನ್‌ ರೆಡ್ಡಿ ಮುಂತಾದವರೆಲ್ಲ ವಿದೇಶಾಂಗ ಸಚಿವಾಲಯದ ಪ್ರಕಟಣೆ ಶೇರ್ ಮಾಡಿ ಎರಡು ಸಾಲು ಗೀಚಿ ಒಗೆದರು.

ಆದರೆ ಮೇಲಿನ ಈ ಎಲ್ಲರ-ಸಿನಿಮಾ, ಕ್ರಿಕೆಟ್ ಮತ್ತು ಪಾಲಿಟಿಕ್ಸ್- ಫಾಲೋವರ್‌ಗಳ ಸಂಖ್ಯೆ ಒಟ್ಟುಗೂಡಿಸಿದರೂ ರಿಹಾನ್ನಾಳ ಫಾಲೋವರ್ ಸಂಖ್ಯೆ ಮುಂದೆ ಜುಜುಬಿ. ಛೇ, ಇದ್ಯಾಕೋ ಸರಿ ಹೋಗ್ತಿಲ್ಲ ಎಂದು ’ಕ್ರೊನೊಲಜಿ ಸಮಝಿಯೆ’ ಖ್ಯಾತಿಯ ಅಮಿತ್ ಶಾ ಕೂಡ ಟೇಲ್‌ಎಂಡ್ ಬ್ಯಾಟ್ಸ್‌ಮನ್ ಆಗಿ ಬಂದು ಗಾಳಿಯಲ್ಲಿ ’ಬ್ಯಾಟು’ ಬೀಸಿದ್ದಾರೆ. (ಅವರು ಬ್ಯಾಟ್ ಬದಲು ದೊಣ್ಣೆ ತಂದಿದ್ದರಂತೆ, ಅದನ್ನು ಅವರ ಕೈಗೆ ಕೊಟ್ಟಿದ್ದು ಜಯ್ ಶಾ ಅಂತೆ!)

ದೊಡ್ಡ ಸಂಖ್ಯೆಯ ಫಾಲೋವರ್‍ಸ್ ಹೊಂದಿರುವ “ವಿಶ್ವಗುರು” ಮೈದಾನಕ್ಕೆ ಇಳಿದಿದ್ದರೆ ಭಕ್ತಗಣಕ್ಕೆ ರೋಮಾಂಚನ ಆಗುತ್ತಿತ್ತೇನೋ? ಆದರೆ ಈ ವಿಷಯವನ್ನು ಮುಂದಿನ ಮನ್ ಕಿ ಬಾತ್‌ಗೆ ಸಾಹೇಬರು ರಿಸರ್ವ್ ಮಾಡಿ ಇಟ್ಟಂತಿದೆ. ಗಣರಾಜ್ಯ ದಿನದ ವಿಷಯವನ್ನು ವಾರದ ನಂತರ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ನೆನೆಪಿದೆಯಲ್ಲ?


ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...