Homeಮುಖಪುಟಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

- Advertisement -
- Advertisement -

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

ನೀವು ಎಂದಾದರೂ ಈ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯಲ್ಲಿ ಈ ದೇಶದ ಸಂಕಷ್ಟಗಳ ಬಗ್ಗೆ ಮಾತಾಡಿದ್ದನ್ನು ಕೇಳಿದ್ದೀರಾ? ಅದಿರಲಿ, ಈ ದಾಖಲೆವೀರ ಕ್ರಿಕೆಟಿಗ ಕಲಾಪಗಳಿಗೆ ಹಾಜರಾದದ್ದೇ ಅಪರೂಪ. ಇಂತಹ ಸಚಿನ್ ಕೂಡ ಬರ್ನಿಂಗ್ ಇಶ್ಯೂ ಮೇಲೆ ಟ್ವೀಟ್ ಮಾಡಬೇಕಾಯಿತು!

ಇನ್ನು ಈ ಅಕ್ಷಯಕುಮಾರ್, ಸುನೀಲ್ ಶೆಟ್ಟಿ, ಅಜಯ್ ದೇವಗನ್ ತಮ್ಮ ಸಿನಿಮಾಗಳಲ್ಲಿ ಕೂಡ ರೈತರ ಇಶ್ಯೂ ಹೈಲೈಟ್ ಮಾಡಿದ್ದೆ ಇಲ್ಲ. ಈ ಮೂವರ ಸಿನಿಮಾಗಳ ತಿರುಳುಗಳೂ ಒಂದೇ, ಅಷ್ಟೇ ಕಳಪೆ. ಅಕ್ಷಯಕುಮಾರ್ ಈಗಾಗಲೆ ಬಿಜೆಪಿಯ ’ಪೋಸ್ಟರ್ ಬಾಯ್’ ಎಂಬ ಬಿರುದನ್ನು ಆನಂದಿಸುತ್ತಿರುವ ಮನುಷ್ಯ. ಸೇನೆ, ಧ್ವಜ ಕೆಲವೊಮ್ಮೆ ಪಂಜಾಬಿ ಅಸ್ಮಿತೆಯ ಕಥಾನಕಗಳ ಮೇಲೆ ವರ್ಷಕ್ಕೊಂದು ಬಿಗ್ ಬಜೆಟ್ ಸಿನಿಮಾ ಮಾಡಿ ಅಸ್ತಿತ್ವ ಉಳಿಸಿಕೊಂಡಿರುವ ಸ್ಟಾರ್. ಈತನೂ ಈಗ ರೈತರ ಪರ ಎನ್ನುವಂತೆ, ಸರ್ಕಾರ ಸಮಸ್ಯೆ ಬಗೆಹರಿಸುತ್ತಿದೆ ಎನ್ನುವಂತೆ ಟ್ವೀಟ್ ಮಾಡಿದ್ದಾನೆ. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಅಜಯ್ ದೇವಗನ್ ಮತ್ತು ಸುನೀಲ್ ಶೆಟ್ಟಿ ಈಗ ಸಿನಿಮಾ ನಿರ್ಮಿಸಬಹುದೇ ಹೊರತು ಅವರೇ ಅಭಿನಯಿಸಿದರೆ ಪುಟ್ಟಾಪೂರಾ ಲಾಸ್ ಪಕ್ಕಾ. ’ವಿಮಲ್’ ಎಂಬ ಗುಟ್ಕಾದ ’ರಾಯಭಾರಿ’ ಆಗಿಯಷ್ಟೇ ’ಕೇಸರಿ’ ಸ್ವಾದದ ಬಗ್ಗೆ ಮಾತನಾಡುವ ಅಜಯ್ ದೇವಗನ್, ಮೊದಲ ಸಲ ’ಕೇಸರಿ’ ಪಡೆಯ ಪರವಾಗಿ ಒಂದು ಟ್ವೀಟನ್ನೂ ಮಾಡಬೇಕಾಗಿತು. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಭಾರತದ ಶ್ರೀಮಂತ ಅವಿಭಕ್ತ ಕುಟುಂಬಗಳು, ಎನ್‌ಆರ್‌ಐಗಳ ಕತೆ-ಚಿತ್ರಕತೆಗಳ ನಿರ್ದೇಶನಕ್ಕೆ ಸಿಮೀತರಾದ ಕರಣ್ ಜೋಹರ್ ಕೂಡ ಭಾರತದ ಒಗ್ಗಟ್ಟಿನ ಕುರಿತು ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಮಗುವಿನ ಸಂಭ್ರಮದಲ್ಲಿದ್ದರೆಂದು ಕಾಣುತ್ತದೆ. ಡೌನ್ ಆರ್ಡರ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ ಸ್ವಲ್ಪ ತಡವಾಗಿ ಇಂತದ್ದೊಂದು ಟ್ವೀಟ್ ಬೌಂಡರಿ ಬೀಸಿದ್ದಾರೆ.

ಗೌತಮ್ ಗಂಭೀರ್ ಈ ಬಗ್ಗೆ ಟ್ವೀಟ್ ಮಾಡಿಲ್ಲ ಅಂತಾ ಕಾಣುತ್ತೆ. ಮೋಸ್ಟ್ಲಿ, ಅವರು ಗಣರಾಜ್ಯ ದಿನದ ಗಲಾಟೆಗೆ ಆಪ್ ಕಾರಣ ಎಂಬ ತಮ್ಮ ಸಂಶೋಧನೆಗೆ ಸಾಕ್ಷ್ಯ ಕಲೆ ಹಾಕುತ್ತಿರಬಹುದು.

ಹೀಗೆ ಇವರೆಲ್ಲ ಒಮ್ಮಿಂದೊಮ್ಮೆಲೆ ತಮ್ಮ ಐಷಾರಾಮಿ ಮಂಪರಿನಿಂದ ಹೊರಬರಲು ರಿಹಾನ್ನಾಳ ಆರು ಪದಗಳ ಟ್ವೀಟ್ ಪುಟಿ ಪುಟಿದು, ಆಕೆಯ ಹಾಡಿನಂತೆ ತೇಲಿ ತೇಲಿ ಬರಬೇಕಾಯಿತು. ಅಷ್ಟಕ್ಕೂ ಇವರೇನೂ ತಾವಾಗಿಯೇ ಟ್ವೀಟ್ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿಯ ಇವರ ’ಉನ್ನತ’ ಹಿತೈಷಿಗಳಿಂದ ಅರ್ಜೆಂಟ್ ಕಾಲ್ ಬಂದ ನಂತರವಷ್ಟೇ ಒಂದು ಟ್ವೀಟ್ ಮಾಡಿ ಮತ್ತೆ ಎಂದಿನಂತೆ ತಮ್ಮ ಮಂಪರಿಗೆ ಜಾರಿದ್ದಾರೆ.

ಹಾಗೆ ನೋಡಿದರೆ, ಬಿಜೆಪಿಯ ಹೊಸ ’ಪೋಸ್ಟರ್ ಗರ್ಲ್’ ಕಂಗನಾ ರಾಣಾವತ್ ಅವರೇ ವಾಸಿ. ಈ ’ಹುಡುಗಿ’ ಸ್ಪಾಂಟೆನಿಯಸ್ ಆಗಿ ರಿಹಾನ್ನಾಗೆ ನೇರಾನೇರ ಪ್ರಶ್ನೆ ಮಾಡಿತ್ತು. ’ರೈತರಲ್ಲ, ಅವರು ಭಯೋತ್ಪಾದಕರು. ಚೀನಾ ಇದರ ಹಿಂದೆ ಇದೆ. ಭಾರತವನ್ನು ದುರ್ಬಲಗೊಳಿಸಿ, ಭಾರತವನ್ನು ತನ್ನ ವಸಾಹತುವನ್ನಾಗಿ ಮಾಡಿಕೊಳ್ಳುವ ಹುನ್ನಾರ ಇಲ್ಲಿದೆ’ ಎಂಬ ಹೊಸ some-ಶೋಧನೆಯನ್ನು ಈ ಚಂದುಳ್ಳಿ ’ಅಂಧಭಕ್ತೆ’ ಮಾಡಿದೆ. ಬಹುಸಮಯ ಪಾಕಿಸ್ತಾನದ ಸುತ್ತಲೆ ಗಿರಕಿ ಹೊಡೆಯುವ sum-ಶೋಧಕ ಅಮಿತ್ ಮಾಳವಿಯನಿಗೆ ಈ ’ಹುಡುಗಿಯನ್ನು’ ನೋಡಿ ನಾಚಿಕೆಯಾಗಬೇಕು!

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಶಾ ಕೂಡ ಫೀಲ್ಡಿಗೆ!

ಬಂಪರ್ ಬಜೆಟ್ ತಯಾರಿಸಿ ಸುಸ್ತಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ, ’ಒನ್ಸ್ ಇನ್ ಎ ಸೆಂಚುರಿ’ ಬಜೆಟ್ ಎಂಬ ಅದಾನಿಯ ಟ್ವೀಟೇ ಟಾನಿಕ್ ಆಗಿ ಒದಗಿ ಬಂದು ಚೇತರಿಕೆ ಕಂಡಿದ್ದರು. ಅವರೂ ಒಂದು ಟ್ವೀಟ್ ಮಾಡಿಯೇ ಬಿಟ್ಟರು. ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಕಿಶನ್‌ ರೆಡ್ಡಿ ಮುಂತಾದವರೆಲ್ಲ ವಿದೇಶಾಂಗ ಸಚಿವಾಲಯದ ಪ್ರಕಟಣೆ ಶೇರ್ ಮಾಡಿ ಎರಡು ಸಾಲು ಗೀಚಿ ಒಗೆದರು.

ಆದರೆ ಮೇಲಿನ ಈ ಎಲ್ಲರ-ಸಿನಿಮಾ, ಕ್ರಿಕೆಟ್ ಮತ್ತು ಪಾಲಿಟಿಕ್ಸ್- ಫಾಲೋವರ್‌ಗಳ ಸಂಖ್ಯೆ ಒಟ್ಟುಗೂಡಿಸಿದರೂ ರಿಹಾನ್ನಾಳ ಫಾಲೋವರ್ ಸಂಖ್ಯೆ ಮುಂದೆ ಜುಜುಬಿ. ಛೇ, ಇದ್ಯಾಕೋ ಸರಿ ಹೋಗ್ತಿಲ್ಲ ಎಂದು ’ಕ್ರೊನೊಲಜಿ ಸಮಝಿಯೆ’ ಖ್ಯಾತಿಯ ಅಮಿತ್ ಶಾ ಕೂಡ ಟೇಲ್‌ಎಂಡ್ ಬ್ಯಾಟ್ಸ್‌ಮನ್ ಆಗಿ ಬಂದು ಗಾಳಿಯಲ್ಲಿ ’ಬ್ಯಾಟು’ ಬೀಸಿದ್ದಾರೆ. (ಅವರು ಬ್ಯಾಟ್ ಬದಲು ದೊಣ್ಣೆ ತಂದಿದ್ದರಂತೆ, ಅದನ್ನು ಅವರ ಕೈಗೆ ಕೊಟ್ಟಿದ್ದು ಜಯ್ ಶಾ ಅಂತೆ!)

ದೊಡ್ಡ ಸಂಖ್ಯೆಯ ಫಾಲೋವರ್‍ಸ್ ಹೊಂದಿರುವ “ವಿಶ್ವಗುರು” ಮೈದಾನಕ್ಕೆ ಇಳಿದಿದ್ದರೆ ಭಕ್ತಗಣಕ್ಕೆ ರೋಮಾಂಚನ ಆಗುತ್ತಿತ್ತೇನೋ? ಆದರೆ ಈ ವಿಷಯವನ್ನು ಮುಂದಿನ ಮನ್ ಕಿ ಬಾತ್‌ಗೆ ಸಾಹೇಬರು ರಿಸರ್ವ್ ಮಾಡಿ ಇಟ್ಟಂತಿದೆ. ಗಣರಾಜ್ಯ ದಿನದ ವಿಷಯವನ್ನು ವಾರದ ನಂತರ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ನೆನೆಪಿದೆಯಲ್ಲ?


ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...