Homeಮುಖಪುಟಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

- Advertisement -
- Advertisement -

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

ನೀವು ಎಂದಾದರೂ ಈ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯಲ್ಲಿ ಈ ದೇಶದ ಸಂಕಷ್ಟಗಳ ಬಗ್ಗೆ ಮಾತಾಡಿದ್ದನ್ನು ಕೇಳಿದ್ದೀರಾ? ಅದಿರಲಿ, ಈ ದಾಖಲೆವೀರ ಕ್ರಿಕೆಟಿಗ ಕಲಾಪಗಳಿಗೆ ಹಾಜರಾದದ್ದೇ ಅಪರೂಪ. ಇಂತಹ ಸಚಿನ್ ಕೂಡ ಬರ್ನಿಂಗ್ ಇಶ್ಯೂ ಮೇಲೆ ಟ್ವೀಟ್ ಮಾಡಬೇಕಾಯಿತು!

ಇನ್ನು ಈ ಅಕ್ಷಯಕುಮಾರ್, ಸುನೀಲ್ ಶೆಟ್ಟಿ, ಅಜಯ್ ದೇವಗನ್ ತಮ್ಮ ಸಿನಿಮಾಗಳಲ್ಲಿ ಕೂಡ ರೈತರ ಇಶ್ಯೂ ಹೈಲೈಟ್ ಮಾಡಿದ್ದೆ ಇಲ್ಲ. ಈ ಮೂವರ ಸಿನಿಮಾಗಳ ತಿರುಳುಗಳೂ ಒಂದೇ, ಅಷ್ಟೇ ಕಳಪೆ. ಅಕ್ಷಯಕುಮಾರ್ ಈಗಾಗಲೆ ಬಿಜೆಪಿಯ ’ಪೋಸ್ಟರ್ ಬಾಯ್’ ಎಂಬ ಬಿರುದನ್ನು ಆನಂದಿಸುತ್ತಿರುವ ಮನುಷ್ಯ. ಸೇನೆ, ಧ್ವಜ ಕೆಲವೊಮ್ಮೆ ಪಂಜಾಬಿ ಅಸ್ಮಿತೆಯ ಕಥಾನಕಗಳ ಮೇಲೆ ವರ್ಷಕ್ಕೊಂದು ಬಿಗ್ ಬಜೆಟ್ ಸಿನಿಮಾ ಮಾಡಿ ಅಸ್ತಿತ್ವ ಉಳಿಸಿಕೊಂಡಿರುವ ಸ್ಟಾರ್. ಈತನೂ ಈಗ ರೈತರ ಪರ ಎನ್ನುವಂತೆ, ಸರ್ಕಾರ ಸಮಸ್ಯೆ ಬಗೆಹರಿಸುತ್ತಿದೆ ಎನ್ನುವಂತೆ ಟ್ವೀಟ್ ಮಾಡಿದ್ದಾನೆ. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಅಜಯ್ ದೇವಗನ್ ಮತ್ತು ಸುನೀಲ್ ಶೆಟ್ಟಿ ಈಗ ಸಿನಿಮಾ ನಿರ್ಮಿಸಬಹುದೇ ಹೊರತು ಅವರೇ ಅಭಿನಯಿಸಿದರೆ ಪುಟ್ಟಾಪೂರಾ ಲಾಸ್ ಪಕ್ಕಾ. ’ವಿಮಲ್’ ಎಂಬ ಗುಟ್ಕಾದ ’ರಾಯಭಾರಿ’ ಆಗಿಯಷ್ಟೇ ’ಕೇಸರಿ’ ಸ್ವಾದದ ಬಗ್ಗೆ ಮಾತನಾಡುವ ಅಜಯ್ ದೇವಗನ್, ಮೊದಲ ಸಲ ’ಕೇಸರಿ’ ಪಡೆಯ ಪರವಾಗಿ ಒಂದು ಟ್ವೀಟನ್ನೂ ಮಾಡಬೇಕಾಗಿತು. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಭಾರತದ ಶ್ರೀಮಂತ ಅವಿಭಕ್ತ ಕುಟುಂಬಗಳು, ಎನ್‌ಆರ್‌ಐಗಳ ಕತೆ-ಚಿತ್ರಕತೆಗಳ ನಿರ್ದೇಶನಕ್ಕೆ ಸಿಮೀತರಾದ ಕರಣ್ ಜೋಹರ್ ಕೂಡ ಭಾರತದ ಒಗ್ಗಟ್ಟಿನ ಕುರಿತು ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಮಗುವಿನ ಸಂಭ್ರಮದಲ್ಲಿದ್ದರೆಂದು ಕಾಣುತ್ತದೆ. ಡೌನ್ ಆರ್ಡರ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ ಸ್ವಲ್ಪ ತಡವಾಗಿ ಇಂತದ್ದೊಂದು ಟ್ವೀಟ್ ಬೌಂಡರಿ ಬೀಸಿದ್ದಾರೆ.

ಗೌತಮ್ ಗಂಭೀರ್ ಈ ಬಗ್ಗೆ ಟ್ವೀಟ್ ಮಾಡಿಲ್ಲ ಅಂತಾ ಕಾಣುತ್ತೆ. ಮೋಸ್ಟ್ಲಿ, ಅವರು ಗಣರಾಜ್ಯ ದಿನದ ಗಲಾಟೆಗೆ ಆಪ್ ಕಾರಣ ಎಂಬ ತಮ್ಮ ಸಂಶೋಧನೆಗೆ ಸಾಕ್ಷ್ಯ ಕಲೆ ಹಾಕುತ್ತಿರಬಹುದು.

ಹೀಗೆ ಇವರೆಲ್ಲ ಒಮ್ಮಿಂದೊಮ್ಮೆಲೆ ತಮ್ಮ ಐಷಾರಾಮಿ ಮಂಪರಿನಿಂದ ಹೊರಬರಲು ರಿಹಾನ್ನಾಳ ಆರು ಪದಗಳ ಟ್ವೀಟ್ ಪುಟಿ ಪುಟಿದು, ಆಕೆಯ ಹಾಡಿನಂತೆ ತೇಲಿ ತೇಲಿ ಬರಬೇಕಾಯಿತು. ಅಷ್ಟಕ್ಕೂ ಇವರೇನೂ ತಾವಾಗಿಯೇ ಟ್ವೀಟ್ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿಯ ಇವರ ’ಉನ್ನತ’ ಹಿತೈಷಿಗಳಿಂದ ಅರ್ಜೆಂಟ್ ಕಾಲ್ ಬಂದ ನಂತರವಷ್ಟೇ ಒಂದು ಟ್ವೀಟ್ ಮಾಡಿ ಮತ್ತೆ ಎಂದಿನಂತೆ ತಮ್ಮ ಮಂಪರಿಗೆ ಜಾರಿದ್ದಾರೆ.

ಹಾಗೆ ನೋಡಿದರೆ, ಬಿಜೆಪಿಯ ಹೊಸ ’ಪೋಸ್ಟರ್ ಗರ್ಲ್’ ಕಂಗನಾ ರಾಣಾವತ್ ಅವರೇ ವಾಸಿ. ಈ ’ಹುಡುಗಿ’ ಸ್ಪಾಂಟೆನಿಯಸ್ ಆಗಿ ರಿಹಾನ್ನಾಗೆ ನೇರಾನೇರ ಪ್ರಶ್ನೆ ಮಾಡಿತ್ತು. ’ರೈತರಲ್ಲ, ಅವರು ಭಯೋತ್ಪಾದಕರು. ಚೀನಾ ಇದರ ಹಿಂದೆ ಇದೆ. ಭಾರತವನ್ನು ದುರ್ಬಲಗೊಳಿಸಿ, ಭಾರತವನ್ನು ತನ್ನ ವಸಾಹತುವನ್ನಾಗಿ ಮಾಡಿಕೊಳ್ಳುವ ಹುನ್ನಾರ ಇಲ್ಲಿದೆ’ ಎಂಬ ಹೊಸ some-ಶೋಧನೆಯನ್ನು ಈ ಚಂದುಳ್ಳಿ ’ಅಂಧಭಕ್ತೆ’ ಮಾಡಿದೆ. ಬಹುಸಮಯ ಪಾಕಿಸ್ತಾನದ ಸುತ್ತಲೆ ಗಿರಕಿ ಹೊಡೆಯುವ sum-ಶೋಧಕ ಅಮಿತ್ ಮಾಳವಿಯನಿಗೆ ಈ ’ಹುಡುಗಿಯನ್ನು’ ನೋಡಿ ನಾಚಿಕೆಯಾಗಬೇಕು!

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಶಾ ಕೂಡ ಫೀಲ್ಡಿಗೆ!

ಬಂಪರ್ ಬಜೆಟ್ ತಯಾರಿಸಿ ಸುಸ್ತಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ, ’ಒನ್ಸ್ ಇನ್ ಎ ಸೆಂಚುರಿ’ ಬಜೆಟ್ ಎಂಬ ಅದಾನಿಯ ಟ್ವೀಟೇ ಟಾನಿಕ್ ಆಗಿ ಒದಗಿ ಬಂದು ಚೇತರಿಕೆ ಕಂಡಿದ್ದರು. ಅವರೂ ಒಂದು ಟ್ವೀಟ್ ಮಾಡಿಯೇ ಬಿಟ್ಟರು. ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಕಿಶನ್‌ ರೆಡ್ಡಿ ಮುಂತಾದವರೆಲ್ಲ ವಿದೇಶಾಂಗ ಸಚಿವಾಲಯದ ಪ್ರಕಟಣೆ ಶೇರ್ ಮಾಡಿ ಎರಡು ಸಾಲು ಗೀಚಿ ಒಗೆದರು.

ಆದರೆ ಮೇಲಿನ ಈ ಎಲ್ಲರ-ಸಿನಿಮಾ, ಕ್ರಿಕೆಟ್ ಮತ್ತು ಪಾಲಿಟಿಕ್ಸ್- ಫಾಲೋವರ್‌ಗಳ ಸಂಖ್ಯೆ ಒಟ್ಟುಗೂಡಿಸಿದರೂ ರಿಹಾನ್ನಾಳ ಫಾಲೋವರ್ ಸಂಖ್ಯೆ ಮುಂದೆ ಜುಜುಬಿ. ಛೇ, ಇದ್ಯಾಕೋ ಸರಿ ಹೋಗ್ತಿಲ್ಲ ಎಂದು ’ಕ್ರೊನೊಲಜಿ ಸಮಝಿಯೆ’ ಖ್ಯಾತಿಯ ಅಮಿತ್ ಶಾ ಕೂಡ ಟೇಲ್‌ಎಂಡ್ ಬ್ಯಾಟ್ಸ್‌ಮನ್ ಆಗಿ ಬಂದು ಗಾಳಿಯಲ್ಲಿ ’ಬ್ಯಾಟು’ ಬೀಸಿದ್ದಾರೆ. (ಅವರು ಬ್ಯಾಟ್ ಬದಲು ದೊಣ್ಣೆ ತಂದಿದ್ದರಂತೆ, ಅದನ್ನು ಅವರ ಕೈಗೆ ಕೊಟ್ಟಿದ್ದು ಜಯ್ ಶಾ ಅಂತೆ!)

ದೊಡ್ಡ ಸಂಖ್ಯೆಯ ಫಾಲೋವರ್‍ಸ್ ಹೊಂದಿರುವ “ವಿಶ್ವಗುರು” ಮೈದಾನಕ್ಕೆ ಇಳಿದಿದ್ದರೆ ಭಕ್ತಗಣಕ್ಕೆ ರೋಮಾಂಚನ ಆಗುತ್ತಿತ್ತೇನೋ? ಆದರೆ ಈ ವಿಷಯವನ್ನು ಮುಂದಿನ ಮನ್ ಕಿ ಬಾತ್‌ಗೆ ಸಾಹೇಬರು ರಿಸರ್ವ್ ಮಾಡಿ ಇಟ್ಟಂತಿದೆ. ಗಣರಾಜ್ಯ ದಿನದ ವಿಷಯವನ್ನು ವಾರದ ನಂತರ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ನೆನೆಪಿದೆಯಲ್ಲ?


ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....