Homeಮುಖಪುಟಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

- Advertisement -
- Advertisement -

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

ನೀವು ಎಂದಾದರೂ ಈ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯಲ್ಲಿ ಈ ದೇಶದ ಸಂಕಷ್ಟಗಳ ಬಗ್ಗೆ ಮಾತಾಡಿದ್ದನ್ನು ಕೇಳಿದ್ದೀರಾ? ಅದಿರಲಿ, ಈ ದಾಖಲೆವೀರ ಕ್ರಿಕೆಟಿಗ ಕಲಾಪಗಳಿಗೆ ಹಾಜರಾದದ್ದೇ ಅಪರೂಪ. ಇಂತಹ ಸಚಿನ್ ಕೂಡ ಬರ್ನಿಂಗ್ ಇಶ್ಯೂ ಮೇಲೆ ಟ್ವೀಟ್ ಮಾಡಬೇಕಾಯಿತು!

ಇನ್ನು ಈ ಅಕ್ಷಯಕುಮಾರ್, ಸುನೀಲ್ ಶೆಟ್ಟಿ, ಅಜಯ್ ದೇವಗನ್ ತಮ್ಮ ಸಿನಿಮಾಗಳಲ್ಲಿ ಕೂಡ ರೈತರ ಇಶ್ಯೂ ಹೈಲೈಟ್ ಮಾಡಿದ್ದೆ ಇಲ್ಲ. ಈ ಮೂವರ ಸಿನಿಮಾಗಳ ತಿರುಳುಗಳೂ ಒಂದೇ, ಅಷ್ಟೇ ಕಳಪೆ. ಅಕ್ಷಯಕುಮಾರ್ ಈಗಾಗಲೆ ಬಿಜೆಪಿಯ ’ಪೋಸ್ಟರ್ ಬಾಯ್’ ಎಂಬ ಬಿರುದನ್ನು ಆನಂದಿಸುತ್ತಿರುವ ಮನುಷ್ಯ. ಸೇನೆ, ಧ್ವಜ ಕೆಲವೊಮ್ಮೆ ಪಂಜಾಬಿ ಅಸ್ಮಿತೆಯ ಕಥಾನಕಗಳ ಮೇಲೆ ವರ್ಷಕ್ಕೊಂದು ಬಿಗ್ ಬಜೆಟ್ ಸಿನಿಮಾ ಮಾಡಿ ಅಸ್ತಿತ್ವ ಉಳಿಸಿಕೊಂಡಿರುವ ಸ್ಟಾರ್. ಈತನೂ ಈಗ ರೈತರ ಪರ ಎನ್ನುವಂತೆ, ಸರ್ಕಾರ ಸಮಸ್ಯೆ ಬಗೆಹರಿಸುತ್ತಿದೆ ಎನ್ನುವಂತೆ ಟ್ವೀಟ್ ಮಾಡಿದ್ದಾನೆ. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಅಜಯ್ ದೇವಗನ್ ಮತ್ತು ಸುನೀಲ್ ಶೆಟ್ಟಿ ಈಗ ಸಿನಿಮಾ ನಿರ್ಮಿಸಬಹುದೇ ಹೊರತು ಅವರೇ ಅಭಿನಯಿಸಿದರೆ ಪುಟ್ಟಾಪೂರಾ ಲಾಸ್ ಪಕ್ಕಾ. ’ವಿಮಲ್’ ಎಂಬ ಗುಟ್ಕಾದ ’ರಾಯಭಾರಿ’ ಆಗಿಯಷ್ಟೇ ’ಕೇಸರಿ’ ಸ್ವಾದದ ಬಗ್ಗೆ ಮಾತನಾಡುವ ಅಜಯ್ ದೇವಗನ್, ಮೊದಲ ಸಲ ’ಕೇಸರಿ’ ಪಡೆಯ ಪರವಾಗಿ ಒಂದು ಟ್ವೀಟನ್ನೂ ಮಾಡಬೇಕಾಗಿತು. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಭಾರತದ ಶ್ರೀಮಂತ ಅವಿಭಕ್ತ ಕುಟುಂಬಗಳು, ಎನ್‌ಆರ್‌ಐಗಳ ಕತೆ-ಚಿತ್ರಕತೆಗಳ ನಿರ್ದೇಶನಕ್ಕೆ ಸಿಮೀತರಾದ ಕರಣ್ ಜೋಹರ್ ಕೂಡ ಭಾರತದ ಒಗ್ಗಟ್ಟಿನ ಕುರಿತು ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಮಗುವಿನ ಸಂಭ್ರಮದಲ್ಲಿದ್ದರೆಂದು ಕಾಣುತ್ತದೆ. ಡೌನ್ ಆರ್ಡರ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ ಸ್ವಲ್ಪ ತಡವಾಗಿ ಇಂತದ್ದೊಂದು ಟ್ವೀಟ್ ಬೌಂಡರಿ ಬೀಸಿದ್ದಾರೆ.

ಗೌತಮ್ ಗಂಭೀರ್ ಈ ಬಗ್ಗೆ ಟ್ವೀಟ್ ಮಾಡಿಲ್ಲ ಅಂತಾ ಕಾಣುತ್ತೆ. ಮೋಸ್ಟ್ಲಿ, ಅವರು ಗಣರಾಜ್ಯ ದಿನದ ಗಲಾಟೆಗೆ ಆಪ್ ಕಾರಣ ಎಂಬ ತಮ್ಮ ಸಂಶೋಧನೆಗೆ ಸಾಕ್ಷ್ಯ ಕಲೆ ಹಾಕುತ್ತಿರಬಹುದು.

ಹೀಗೆ ಇವರೆಲ್ಲ ಒಮ್ಮಿಂದೊಮ್ಮೆಲೆ ತಮ್ಮ ಐಷಾರಾಮಿ ಮಂಪರಿನಿಂದ ಹೊರಬರಲು ರಿಹಾನ್ನಾಳ ಆರು ಪದಗಳ ಟ್ವೀಟ್ ಪುಟಿ ಪುಟಿದು, ಆಕೆಯ ಹಾಡಿನಂತೆ ತೇಲಿ ತೇಲಿ ಬರಬೇಕಾಯಿತು. ಅಷ್ಟಕ್ಕೂ ಇವರೇನೂ ತಾವಾಗಿಯೇ ಟ್ವೀಟ್ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿಯ ಇವರ ’ಉನ್ನತ’ ಹಿತೈಷಿಗಳಿಂದ ಅರ್ಜೆಂಟ್ ಕಾಲ್ ಬಂದ ನಂತರವಷ್ಟೇ ಒಂದು ಟ್ವೀಟ್ ಮಾಡಿ ಮತ್ತೆ ಎಂದಿನಂತೆ ತಮ್ಮ ಮಂಪರಿಗೆ ಜಾರಿದ್ದಾರೆ.

ಹಾಗೆ ನೋಡಿದರೆ, ಬಿಜೆಪಿಯ ಹೊಸ ’ಪೋಸ್ಟರ್ ಗರ್ಲ್’ ಕಂಗನಾ ರಾಣಾವತ್ ಅವರೇ ವಾಸಿ. ಈ ’ಹುಡುಗಿ’ ಸ್ಪಾಂಟೆನಿಯಸ್ ಆಗಿ ರಿಹಾನ್ನಾಗೆ ನೇರಾನೇರ ಪ್ರಶ್ನೆ ಮಾಡಿತ್ತು. ’ರೈತರಲ್ಲ, ಅವರು ಭಯೋತ್ಪಾದಕರು. ಚೀನಾ ಇದರ ಹಿಂದೆ ಇದೆ. ಭಾರತವನ್ನು ದುರ್ಬಲಗೊಳಿಸಿ, ಭಾರತವನ್ನು ತನ್ನ ವಸಾಹತುವನ್ನಾಗಿ ಮಾಡಿಕೊಳ್ಳುವ ಹುನ್ನಾರ ಇಲ್ಲಿದೆ’ ಎಂಬ ಹೊಸ some-ಶೋಧನೆಯನ್ನು ಈ ಚಂದುಳ್ಳಿ ’ಅಂಧಭಕ್ತೆ’ ಮಾಡಿದೆ. ಬಹುಸಮಯ ಪಾಕಿಸ್ತಾನದ ಸುತ್ತಲೆ ಗಿರಕಿ ಹೊಡೆಯುವ sum-ಶೋಧಕ ಅಮಿತ್ ಮಾಳವಿಯನಿಗೆ ಈ ’ಹುಡುಗಿಯನ್ನು’ ನೋಡಿ ನಾಚಿಕೆಯಾಗಬೇಕು!

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಶಾ ಕೂಡ ಫೀಲ್ಡಿಗೆ!

ಬಂಪರ್ ಬಜೆಟ್ ತಯಾರಿಸಿ ಸುಸ್ತಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ, ’ಒನ್ಸ್ ಇನ್ ಎ ಸೆಂಚುರಿ’ ಬಜೆಟ್ ಎಂಬ ಅದಾನಿಯ ಟ್ವೀಟೇ ಟಾನಿಕ್ ಆಗಿ ಒದಗಿ ಬಂದು ಚೇತರಿಕೆ ಕಂಡಿದ್ದರು. ಅವರೂ ಒಂದು ಟ್ವೀಟ್ ಮಾಡಿಯೇ ಬಿಟ್ಟರು. ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಕಿಶನ್‌ ರೆಡ್ಡಿ ಮುಂತಾದವರೆಲ್ಲ ವಿದೇಶಾಂಗ ಸಚಿವಾಲಯದ ಪ್ರಕಟಣೆ ಶೇರ್ ಮಾಡಿ ಎರಡು ಸಾಲು ಗೀಚಿ ಒಗೆದರು.

ಆದರೆ ಮೇಲಿನ ಈ ಎಲ್ಲರ-ಸಿನಿಮಾ, ಕ್ರಿಕೆಟ್ ಮತ್ತು ಪಾಲಿಟಿಕ್ಸ್- ಫಾಲೋವರ್‌ಗಳ ಸಂಖ್ಯೆ ಒಟ್ಟುಗೂಡಿಸಿದರೂ ರಿಹಾನ್ನಾಳ ಫಾಲೋವರ್ ಸಂಖ್ಯೆ ಮುಂದೆ ಜುಜುಬಿ. ಛೇ, ಇದ್ಯಾಕೋ ಸರಿ ಹೋಗ್ತಿಲ್ಲ ಎಂದು ’ಕ್ರೊನೊಲಜಿ ಸಮಝಿಯೆ’ ಖ್ಯಾತಿಯ ಅಮಿತ್ ಶಾ ಕೂಡ ಟೇಲ್‌ಎಂಡ್ ಬ್ಯಾಟ್ಸ್‌ಮನ್ ಆಗಿ ಬಂದು ಗಾಳಿಯಲ್ಲಿ ’ಬ್ಯಾಟು’ ಬೀಸಿದ್ದಾರೆ. (ಅವರು ಬ್ಯಾಟ್ ಬದಲು ದೊಣ್ಣೆ ತಂದಿದ್ದರಂತೆ, ಅದನ್ನು ಅವರ ಕೈಗೆ ಕೊಟ್ಟಿದ್ದು ಜಯ್ ಶಾ ಅಂತೆ!)

ದೊಡ್ಡ ಸಂಖ್ಯೆಯ ಫಾಲೋವರ್‍ಸ್ ಹೊಂದಿರುವ “ವಿಶ್ವಗುರು” ಮೈದಾನಕ್ಕೆ ಇಳಿದಿದ್ದರೆ ಭಕ್ತಗಣಕ್ಕೆ ರೋಮಾಂಚನ ಆಗುತ್ತಿತ್ತೇನೋ? ಆದರೆ ಈ ವಿಷಯವನ್ನು ಮುಂದಿನ ಮನ್ ಕಿ ಬಾತ್‌ಗೆ ಸಾಹೇಬರು ರಿಸರ್ವ್ ಮಾಡಿ ಇಟ್ಟಂತಿದೆ. ಗಣರಾಜ್ಯ ದಿನದ ವಿಷಯವನ್ನು ವಾರದ ನಂತರ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ನೆನೆಪಿದೆಯಲ್ಲ?


ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...