Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...