Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....