Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...