Homeಮುಖಪುಟಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ...

ಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ ಕೇಸ್‌ ‘ಕಟ್ಟುಕಥೆ’ ಎಂದು ತೀರ್ಪು ನೀಡಿದ ಕೋರ್ಟ್‌

- Advertisement -
- Advertisement -

ಕ್ರಿಕೆಟ್‌ ಪಂದ್ಯದಲ್ಲಿ ಪಾಕ್‌ ವಿಜಯವನ್ನು ಸಂಭ್ರಮಾಚಣೆ ನಡೆಸಿದ್ದಾರೆ ಎಂದು ಆರೋಪಿಸಿ 17 ಮಂದಿ ಮುಸ್ಲಿಮರ ಮೇಲೆ ಆರೋಪ ಹೊರಿಸಲಾಗಿದ್ದ 6 ವರ್ಷಗಳ ಬಳಿಕ ಮಧ್ಯಪ್ರದೇಶದ ನ್ಯಾಯಾಲಯವು ಇದನ್ನು ಕಟ್ಟುಕಥೆ ಎಂದು ಕರೆದಿದ್ದು, ಈ ಕುರಿತು ಸಾಕ್ಷಿಯನ್ನು ನೀಡಿದ ಹಿಂದೂ ದೂರುದಾರರು ನಮ್ಮನ್ನು ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.

ಘಟನೆಯಲ್ಲಿ ಬಂಧಿತರು ಅಕ್ಟೋಬರ್ 2023ರಲ್ಲಿ ಬಿಡುಗಡೆಯಾಗಿದ್ದರು , ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಥಳಿಸಲಾಯಿತು ಮತ್ತು ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದ ಓರ್ವ ಆರೋಪಿ ಘಟನೆಯಿಂದ ನೊಂದು 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಧ್ಯಪ್ರದೇಶದ ಮೊಹದ್ ಗ್ರಾಮದ ನಿವಾಸಿಗಳು ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯುತ್ತಿದ್ದರೆ ವೀಕ್ಷಿಸಲು ಹಿಂದೇಟು ಹಾಕುತ್ತಿದ್ದಾರೆ. 18 ಜೂನ್ 2017ರಂದು ಲಂಡನ್‌ನ ಓವಲ್ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ವೇಳೆ ನಡೆದ ಕರಾಳ ಘಟನೆ ಅವರ ಜೀವನದಿಂದ ಇಂದು ಕೂಡ ಮಾಸಿ ಹೋಗಿಲ್ಲ. ಭಾರತವು ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಸೋತ ಬಳಿಕ ಗ್ರಾಮದ ನಿವಾಸಿಗಳು ಸಿಹಿ ಹಂಚಿ, ಪಾಕ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ವ್ಯಾಪಕವಾಗಿ ವದಂತಿ ಹಬ್ಬಿತ್ತು. ಇದರ ಮುಂದುವರಿದ ಭಾಗವಾಗಿ 17 ಮಂದಿ ಮತ್ತು ಇಬ್ಬರು ಬಾಲಕರ ಮೇಲೆ ಭಾರತೀಯ ದಂಡ ಸಂಹಿತೆ, 1860ರ ಅಡಿಯಲ್ಲಿ ದೇಶದ್ರೋಹ ಮತ್ತು ಕ್ರಿಮಿನಲ್ ಪಿತೂರಿಯಡಿ ಮೊಕದ್ದಮೆ ದಾಖಲಿಸಲಾಗಿತ್ತು. ಆ ಬಳಿಕ ದೇಶದ್ರೋಹದ ಪ್ರಕರಣವನ್ನು ಕೈಬಿಟ್ಟು, ವಿವಿಧ ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು, ಹಿಂದೂ ರಾಷ್ಟ್ರೀಯತೆ ಹೆಚ್ಚುತ್ತಿದೆ ಮತ್ತು ರಾಷ್ಟ್ರ ವಿರೋಧಿ ಎಂಬ ಪದವನ್ನು ವಿಮರ್ಶಕರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ಮುಕ್ತವಾಗಿ ಬಳಸಲಾಗುತ್ತಿತ್ತು. ಮುಖ್ಯವಾಹಿನಿಯ ಮಾಧ್ಯಮವು ಇಸ್ಲಾಮೋಫೋಬಿಯಾವನ್ನು ಹರಡುತ್ತಿತ್ತು. ಇದರ ಭಾಗವಾಗಿ  ಸುದ್ದಿ ವಾಹಿನಿಗಳು ಪ್ರಕರಣದ ಆರೋಪಿಗಳನ್ನು ‘ದೇಶದ್ರೋಹಿಗಳು’ ಎಂದು ಕರೆದಿವೆ.

ಆ ಘಟನೆಯು ನಮ್ಮ ಮೇಲೆ ಆಳವಾದ ಪರಿಣಾಮವನ್ನು ಬೀರಿದೆ, ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ಹಳ್ಳಿಗರು ಕ್ರಿಕೆಟ್ ಆಡುವುದಿಲ್ಲ ಅಥವಾ ಟಿವಿ ನೋಡುವುದಿಲ್ಲ ಎಂದು ಗ್ರಾಮದ ಮುಖ್ಯಸ್ಥ ರಫೀಕ್ ತದ್ವಿ ಹೇಳಿದ್ದಾರೆ. 17 ಮಂದಿಯನ್ನು ಬಂಧಿಸಿ, ಜೈಲಿಗೆ ತಳ್ಳಿ, ಥಳಿಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ, ಕೋರ್ಟ್‌ಗಳಿಗೆ ಅಲೆದಾಡಿಸಿದ 6 ವರ್ಷಗಳ ಬಳಿಕ 16 ಮಂದಿಯನ್ನು ಮ್ಯಾಜಿಸ್ಟ್ರೇಟ್ ದೇವಂದರ್ ಶರ್ಮಾ ಅವರ ಪೀಠ ಖುಲಾಸೆಗೊಳಿಸಿದೆ. ತಮ್ಮಲ್ಲಿ ಸುಳ್ಳು ಆರೋಪಗಳನ್ನು ಮಾಡುವಂತೆ ಒತ್ತಾಯಿಸಲಾಯಿತು ಎಂದು ದೂರುದಾರರು ಮತ್ತು ಸಾಕ್ಷಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎಲ್ಲಾ ಪುರಾವೆಗಳು, ವಾದಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಪರಿಶೀಲಿಸಿದ ನಂತರ, ಆರೋಪಿಗಳು ಘೋಷಣೆಗಳನ್ನು ಕೂಗಿದರು ಮತ್ತು ಪಟಾಕಿ ಸುಟ್ಟರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಶರ್ಮಾ ಅವರು 9 ಅಕ್ಟೋಬರ್ 2023ರಂದು ನೀಡಿದ ತೀರ್ಪಿನಲ್ಲಿ ಹೇಳಿದ್ದಾರೆ. ಇದಲ್ಲದೆ ಐಪಿಸಿಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲು ಪುರಾವೆಗಳನ್ನು ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ. ಹೀಗಾಗಿ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮಾಧ್ಯಮಗಳು ಜೂನ್ 2017ರಲ್ಲಿ ಈ ಘಟನೆಯನ್ನು ವ್ಯಾಪಕವಾಗಿ ಪ್ರಸಾರ ಮಾಡಿದರೂ, ಅವರನ್ನು ದೋಷಮುಕ್ತಗೊಳಿಸಿದ ಅಕ್ಟೋಬರ್ ತೀರ್ಪುನ್ನು ವರದಿ ಮಾಡಿಲ್ಲ. 17 ಅಪರಾಧಿಗಳ ಜೊತೆಗೆ 16 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತರಾದ ಮುಬಾರಿಕ್ ತದ್ವಿ ಮತ್ತು ಜುಬೈರ್ ತದ್ವಿ ಅವರನ್ನು ಜೂನ್ 2022ರಲ್ಲಿ ಬಾಲಾಪರಾಧಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಆದರೆ ಆ ಬಳಿಕ ಅವರು ಶಾಲೆಯನ್ನು ಬಿಟ್ಟಿದ್ದಾರೆ. ಈ ಘಟನೆಯಿಂದ ಇಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ರುಬಾಬ್ ನವಾಬ್(40) ಫೆಬ್ರವರಿ 2019ರಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೋರ್ವರಾದ ಮುಕದ್ದರ್ ತಾದ್ವಿ (60) ಅವರು ತಮ್ಮ ಮಗ ಸಿಕಂದರ್ ತಾದ್ವಿ ಬಂಧನದ ಆಘಾತದಿಂದ ನವೆಂಬರ್ 2021ರಲ್ಲಿ ನಿಧನರಾಗಿದ್ದರು.

ಮಧ್ಯಪ್ರದೇಶ-ಮಹಾರಾಷ್ಟ್ರ ಗಡಿಯಲ್ಲಿರುವ ಮೊಹದ್ ಗ್ರಾಮವು 4,000 ನಿವಾಸಿಗಳಿಗೆ ನೆಲೆಯಾಗಿದೆ, ಬಹುತೇಕವಾಗಿ ಅಂಚಿನಲ್ಲಿರುವ ದಲಿತರು, ಬುಡಕಟ್ಟುಗಳು ಮತ್ತು ಇಸ್ಲಾಂಗೆ ಮತಾಂತರಗೊಂಡ ಭಿಲ್ಲರ ಉಪಜಾತಿಯಾದ ತದ್ವಿ ಭಿಲ್ ಮುಸ್ಲಿಮರು ಇಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿ ವಾಸಿಸುವ ಬಹುತೇಕ ಎಲ್ಲರೂ ಸಣ್ಣ ರೈತರು ಅಥವಾ ದೈನಂದಿನ ಕೂಲಿ ಕೆಲಸಗಾರರಾಗಿದ್ದಾರೆ.

ಪ್ರಕರಣದಲ್ಲಿ ಆರೋಪಿತ 9 ಮಂದಿ 25ರಿಂದ 60 ವರ್ಷ ವಯಸ್ಸಿನವರು. ಜೂನ್ 2017ರಲ್ಲಿ ಶಹಪುರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಸಂಜಯ್ ಪಾಠಕ್ ಮತ್ತು ಇತರ ಪೊಲೀಸ್ ಸಿಬ್ಬಂದಿ ನಮ್ಮ ಮೇಲೆ ಒದ್ದು, ನಿಂದಿಸಿ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ತಮ್ಮ ಗಡ್ಡವನ್ನು ಎಳೆದಿದ್ದಾರೆ, ಇದಕ್ಕೆ ವಿರೋಧಿಸಿದರೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸರು ಎರಡು ದಿನ ಆಹಾರ ನೀಡದೆ ದೌರ್ಜನ್ಯ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಚಹಾ ನೀಡಲು ಬಂದ ವ್ಯಕ್ತಿ ಕೂಡ ನಮ್ಮನ್ನು ಒದೆಯುತ್ತಿದ್ದರು, ನಮ್ಮನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದರು ಎಂದು 32 ವರ್ಷದ ದೈನಂದಿನ ಕೂಲಿ ಇಮಾಮ್ ತಾದ್ವಿ ಹೇಳಿದ್ದಾರೆ. ನಮಗೆ ಚಿತ್ರಹಿಂಸೆ ನೀಡಲಾಗಿದೆ. ಅವರು ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವ ಮೊದಲು ನಮ್ಮನ್ನು ಥಳಿಸಿದಾಗ ಇಡೀ ಗ್ರಾಮ ನೋಡಿದೆ, ನಾವು ಗಂಭೀರವಾಗಿದ್ದೆವು, ನಮಗೆ ಮ್ಯಾಜಿಸ್ಟ್ರೇಟ್ ಮುಂದೆ ಮಾತನಾಡಲು ಕೂಡ ಸಾಧ್ಯವಾಗಲಿಲ್ಲ. ತಮ್ಮನ್ನು ಭಯೋತ್ಪಾದಕರು ಎಂದು ಕರೆಯಲಾಗುತ್ತಿತ್ತು ಮತ್ತು ಜೈಲಿನಲ್ಲಿದ್ದಾಗ ಪ್ರತಿದಿನ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮತ್ತು ನೆಲವನ್ನು ಒರೆಸಲು ಹೇಳುತ್ತಿದ್ದರು ಎಂದು ಪೊಲೀಸ್‌ ದೌರ್ಜನ್ಯದ ಬಗ್ಗೆ ಸಂತ್ರಸ್ತರು ನೋವನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿ: ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...