Homeಮುಖಪುಟಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ...

ಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ ಕೇಸ್‌ ‘ಕಟ್ಟುಕಥೆ’ ಎಂದು ತೀರ್ಪು ನೀಡಿದ ಕೋರ್ಟ್‌

- Advertisement -
- Advertisement -

ಕ್ರಿಕೆಟ್‌ ಪಂದ್ಯದಲ್ಲಿ ಪಾಕ್‌ ವಿಜಯವನ್ನು ಸಂಭ್ರಮಾಚಣೆ ನಡೆಸಿದ್ದಾರೆ ಎಂದು ಆರೋಪಿಸಿ 17 ಮಂದಿ ಮುಸ್ಲಿಮರ ಮೇಲೆ ಆರೋಪ ಹೊರಿಸಲಾಗಿದ್ದ 6 ವರ್ಷಗಳ ಬಳಿಕ ಮಧ್ಯಪ್ರದೇಶದ ನ್ಯಾಯಾಲಯವು ಇದನ್ನು ಕಟ್ಟುಕಥೆ ಎಂದು ಕರೆದಿದ್ದು, ಈ ಕುರಿತು ಸಾಕ್ಷಿಯನ್ನು ನೀಡಿದ ಹಿಂದೂ ದೂರುದಾರರು ನಮ್ಮನ್ನು ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.

ಘಟನೆಯಲ್ಲಿ ಬಂಧಿತರು ಅಕ್ಟೋಬರ್ 2023ರಲ್ಲಿ ಬಿಡುಗಡೆಯಾಗಿದ್ದರು , ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಥಳಿಸಲಾಯಿತು ಮತ್ತು ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದ ಓರ್ವ ಆರೋಪಿ ಘಟನೆಯಿಂದ ನೊಂದು 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಧ್ಯಪ್ರದೇಶದ ಮೊಹದ್ ಗ್ರಾಮದ ನಿವಾಸಿಗಳು ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯುತ್ತಿದ್ದರೆ ವೀಕ್ಷಿಸಲು ಹಿಂದೇಟು ಹಾಕುತ್ತಿದ್ದಾರೆ. 18 ಜೂನ್ 2017ರಂದು ಲಂಡನ್‌ನ ಓವಲ್ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ವೇಳೆ ನಡೆದ ಕರಾಳ ಘಟನೆ ಅವರ ಜೀವನದಿಂದ ಇಂದು ಕೂಡ ಮಾಸಿ ಹೋಗಿಲ್ಲ. ಭಾರತವು ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಸೋತ ಬಳಿಕ ಗ್ರಾಮದ ನಿವಾಸಿಗಳು ಸಿಹಿ ಹಂಚಿ, ಪಾಕ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ವ್ಯಾಪಕವಾಗಿ ವದಂತಿ ಹಬ್ಬಿತ್ತು. ಇದರ ಮುಂದುವರಿದ ಭಾಗವಾಗಿ 17 ಮಂದಿ ಮತ್ತು ಇಬ್ಬರು ಬಾಲಕರ ಮೇಲೆ ಭಾರತೀಯ ದಂಡ ಸಂಹಿತೆ, 1860ರ ಅಡಿಯಲ್ಲಿ ದೇಶದ್ರೋಹ ಮತ್ತು ಕ್ರಿಮಿನಲ್ ಪಿತೂರಿಯಡಿ ಮೊಕದ್ದಮೆ ದಾಖಲಿಸಲಾಗಿತ್ತು. ಆ ಬಳಿಕ ದೇಶದ್ರೋಹದ ಪ್ರಕರಣವನ್ನು ಕೈಬಿಟ್ಟು, ವಿವಿಧ ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು, ಹಿಂದೂ ರಾಷ್ಟ್ರೀಯತೆ ಹೆಚ್ಚುತ್ತಿದೆ ಮತ್ತು ರಾಷ್ಟ್ರ ವಿರೋಧಿ ಎಂಬ ಪದವನ್ನು ವಿಮರ್ಶಕರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ಮುಕ್ತವಾಗಿ ಬಳಸಲಾಗುತ್ತಿತ್ತು. ಮುಖ್ಯವಾಹಿನಿಯ ಮಾಧ್ಯಮವು ಇಸ್ಲಾಮೋಫೋಬಿಯಾವನ್ನು ಹರಡುತ್ತಿತ್ತು. ಇದರ ಭಾಗವಾಗಿ  ಸುದ್ದಿ ವಾಹಿನಿಗಳು ಪ್ರಕರಣದ ಆರೋಪಿಗಳನ್ನು ‘ದೇಶದ್ರೋಹಿಗಳು’ ಎಂದು ಕರೆದಿವೆ.

ಆ ಘಟನೆಯು ನಮ್ಮ ಮೇಲೆ ಆಳವಾದ ಪರಿಣಾಮವನ್ನು ಬೀರಿದೆ, ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ಹಳ್ಳಿಗರು ಕ್ರಿಕೆಟ್ ಆಡುವುದಿಲ್ಲ ಅಥವಾ ಟಿವಿ ನೋಡುವುದಿಲ್ಲ ಎಂದು ಗ್ರಾಮದ ಮುಖ್ಯಸ್ಥ ರಫೀಕ್ ತದ್ವಿ ಹೇಳಿದ್ದಾರೆ. 17 ಮಂದಿಯನ್ನು ಬಂಧಿಸಿ, ಜೈಲಿಗೆ ತಳ್ಳಿ, ಥಳಿಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ, ಕೋರ್ಟ್‌ಗಳಿಗೆ ಅಲೆದಾಡಿಸಿದ 6 ವರ್ಷಗಳ ಬಳಿಕ 16 ಮಂದಿಯನ್ನು ಮ್ಯಾಜಿಸ್ಟ್ರೇಟ್ ದೇವಂದರ್ ಶರ್ಮಾ ಅವರ ಪೀಠ ಖುಲಾಸೆಗೊಳಿಸಿದೆ. ತಮ್ಮಲ್ಲಿ ಸುಳ್ಳು ಆರೋಪಗಳನ್ನು ಮಾಡುವಂತೆ ಒತ್ತಾಯಿಸಲಾಯಿತು ಎಂದು ದೂರುದಾರರು ಮತ್ತು ಸಾಕ್ಷಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎಲ್ಲಾ ಪುರಾವೆಗಳು, ವಾದಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಪರಿಶೀಲಿಸಿದ ನಂತರ, ಆರೋಪಿಗಳು ಘೋಷಣೆಗಳನ್ನು ಕೂಗಿದರು ಮತ್ತು ಪಟಾಕಿ ಸುಟ್ಟರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಶರ್ಮಾ ಅವರು 9 ಅಕ್ಟೋಬರ್ 2023ರಂದು ನೀಡಿದ ತೀರ್ಪಿನಲ್ಲಿ ಹೇಳಿದ್ದಾರೆ. ಇದಲ್ಲದೆ ಐಪಿಸಿಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲು ಪುರಾವೆಗಳನ್ನು ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ. ಹೀಗಾಗಿ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮಾಧ್ಯಮಗಳು ಜೂನ್ 2017ರಲ್ಲಿ ಈ ಘಟನೆಯನ್ನು ವ್ಯಾಪಕವಾಗಿ ಪ್ರಸಾರ ಮಾಡಿದರೂ, ಅವರನ್ನು ದೋಷಮುಕ್ತಗೊಳಿಸಿದ ಅಕ್ಟೋಬರ್ ತೀರ್ಪುನ್ನು ವರದಿ ಮಾಡಿಲ್ಲ. 17 ಅಪರಾಧಿಗಳ ಜೊತೆಗೆ 16 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತರಾದ ಮುಬಾರಿಕ್ ತದ್ವಿ ಮತ್ತು ಜುಬೈರ್ ತದ್ವಿ ಅವರನ್ನು ಜೂನ್ 2022ರಲ್ಲಿ ಬಾಲಾಪರಾಧಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಆದರೆ ಆ ಬಳಿಕ ಅವರು ಶಾಲೆಯನ್ನು ಬಿಟ್ಟಿದ್ದಾರೆ. ಈ ಘಟನೆಯಿಂದ ಇಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ರುಬಾಬ್ ನವಾಬ್(40) ಫೆಬ್ರವರಿ 2019ರಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೋರ್ವರಾದ ಮುಕದ್ದರ್ ತಾದ್ವಿ (60) ಅವರು ತಮ್ಮ ಮಗ ಸಿಕಂದರ್ ತಾದ್ವಿ ಬಂಧನದ ಆಘಾತದಿಂದ ನವೆಂಬರ್ 2021ರಲ್ಲಿ ನಿಧನರಾಗಿದ್ದರು.

ಮಧ್ಯಪ್ರದೇಶ-ಮಹಾರಾಷ್ಟ್ರ ಗಡಿಯಲ್ಲಿರುವ ಮೊಹದ್ ಗ್ರಾಮವು 4,000 ನಿವಾಸಿಗಳಿಗೆ ನೆಲೆಯಾಗಿದೆ, ಬಹುತೇಕವಾಗಿ ಅಂಚಿನಲ್ಲಿರುವ ದಲಿತರು, ಬುಡಕಟ್ಟುಗಳು ಮತ್ತು ಇಸ್ಲಾಂಗೆ ಮತಾಂತರಗೊಂಡ ಭಿಲ್ಲರ ಉಪಜಾತಿಯಾದ ತದ್ವಿ ಭಿಲ್ ಮುಸ್ಲಿಮರು ಇಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿ ವಾಸಿಸುವ ಬಹುತೇಕ ಎಲ್ಲರೂ ಸಣ್ಣ ರೈತರು ಅಥವಾ ದೈನಂದಿನ ಕೂಲಿ ಕೆಲಸಗಾರರಾಗಿದ್ದಾರೆ.

ಪ್ರಕರಣದಲ್ಲಿ ಆರೋಪಿತ 9 ಮಂದಿ 25ರಿಂದ 60 ವರ್ಷ ವಯಸ್ಸಿನವರು. ಜೂನ್ 2017ರಲ್ಲಿ ಶಹಪುರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಸಂಜಯ್ ಪಾಠಕ್ ಮತ್ತು ಇತರ ಪೊಲೀಸ್ ಸಿಬ್ಬಂದಿ ನಮ್ಮ ಮೇಲೆ ಒದ್ದು, ನಿಂದಿಸಿ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ತಮ್ಮ ಗಡ್ಡವನ್ನು ಎಳೆದಿದ್ದಾರೆ, ಇದಕ್ಕೆ ವಿರೋಧಿಸಿದರೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸರು ಎರಡು ದಿನ ಆಹಾರ ನೀಡದೆ ದೌರ್ಜನ್ಯ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಚಹಾ ನೀಡಲು ಬಂದ ವ್ಯಕ್ತಿ ಕೂಡ ನಮ್ಮನ್ನು ಒದೆಯುತ್ತಿದ್ದರು, ನಮ್ಮನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದರು ಎಂದು 32 ವರ್ಷದ ದೈನಂದಿನ ಕೂಲಿ ಇಮಾಮ್ ತಾದ್ವಿ ಹೇಳಿದ್ದಾರೆ. ನಮಗೆ ಚಿತ್ರಹಿಂಸೆ ನೀಡಲಾಗಿದೆ. ಅವರು ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವ ಮೊದಲು ನಮ್ಮನ್ನು ಥಳಿಸಿದಾಗ ಇಡೀ ಗ್ರಾಮ ನೋಡಿದೆ, ನಾವು ಗಂಭೀರವಾಗಿದ್ದೆವು, ನಮಗೆ ಮ್ಯಾಜಿಸ್ಟ್ರೇಟ್ ಮುಂದೆ ಮಾತನಾಡಲು ಕೂಡ ಸಾಧ್ಯವಾಗಲಿಲ್ಲ. ತಮ್ಮನ್ನು ಭಯೋತ್ಪಾದಕರು ಎಂದು ಕರೆಯಲಾಗುತ್ತಿತ್ತು ಮತ್ತು ಜೈಲಿನಲ್ಲಿದ್ದಾಗ ಪ್ರತಿದಿನ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮತ್ತು ನೆಲವನ್ನು ಒರೆಸಲು ಹೇಳುತ್ತಿದ್ದರು ಎಂದು ಪೊಲೀಸ್‌ ದೌರ್ಜನ್ಯದ ಬಗ್ಗೆ ಸಂತ್ರಸ್ತರು ನೋವನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿ: ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...