Homeಕರ್ನಾಟಕಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

ಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷಗಳು ಕಳೆದಿವೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗೌರಿ ಸಮಾಧಿಯ ಬಳಿ ಸೇರಿದ ಹೋರಾಟಗಾರರು, ಒಡನಾಡಿಗಳು ನುಡಿನಮನ ಸಲ್ಲಿಸಿದರು ಗೌರವ ನಮನ ಸಲ್ಲಿಸಿದರು.

ಈ ಗೌರವನಮನ ಕಾರ್ಯಕ್ರಮದಲ್ಲಿ ರೈತ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಸೇರಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

ಈ ವೇಳೆ ಮಾತನಾಡಿದ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಉಲ್ಲೇಖಿಸಿ, “ಸಣ್ಣದೊಂದು ನಿರಾಳತೆಯನ್ನು ಕಂಡಿದ್ದೇವೆ. ಸಣ್ಣದೊಂದು ನಿಟ್ಟುಸಿರು ಸಿಕ್ಕಿದೆ. ಗೌರಿಯವರ ಎದೆಯ ಮೇಲಿನ ಚಪ್ಪಡಿಯ ಭಾರ ಸ್ವಲ್ಪ ಕಡಿಮೆಯಾಗಿದೆ. ನಮ್ಮ ಕುತ್ತಿಗೆಯ ಮೇಲೆ ಕೂತಿದ್ದ ದುಸ್ವಪ್ನ ಮತ್ತು ದುರಾಡಳಿತವನ್ನು ಸ್ವಲ್ಪ ಮಟ್ಟಿಗೆ ಸರಿಸಿದ್ದೇವೆ” ಎಂದು ಬಣ್ಣಿಸಿದರು.

”ಹಲವು ಪರ್ಯಾಯ ಸಂಸ್ಥೆಗಳು ಚಿಗುರೊಡೆದಿವೆ. ಗೌರಿಯ ಕುಟುಂಬ ವಿಶಾಲವಾಗುತ್ತಿದೆ. ಎಲ್ಲ ಕಡೆ ಇರುವ ಜೀವಪರ ಕೊಂಡಿಗಳು ಬೆಸೆಯುತ್ತಿವೆ. ಗುರಿಯ ಜೊತೆ ಸಾಗುತ್ತಿದ್ದೇವೆ. 2024ಕ್ಕೆ ನಮ್ಮ ಜವಾಬ್ದಾರಿ ಹೆಚ್ಚಿದೆ” ಎಂದು ಎಚ್ಚರಿಸಿದರು.

ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ”ಗೌರಿಯಕ್ಕ ನಮಗೆಲ್ಲ ಒಂದು ಮಾದರಿ ಮತ್ತು ಅನುಕರಣೀಯ ವ್ಯಕ್ತಿತ್ವ. ಅವರು ಅಂದು ಹೇಳಿದ ಎಲ್ಲ ಮಾತುಗಳು ಇಂದು ಸತ್ಯವಾಗುತ್ತಿವೆ. ಮನೆಯ ಹಿರಿಯಕ್ಕನನ್ನು ಕಳೆದುಕೊಂಡಿದ್ದೇವೆ” ಎಂದು ಗೌರಿಯವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇನ್ನು ಗೌರಿಯವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ”ಗೌರಿ ಕುಟುಂಬ ಬೆಳೆಯುತ್ತಿದೆ. ಇಂದು ಅವಳು ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು. ವೈಯಕ್ತಿಕವಾಗಿ ಸಿದ್ದರಾಮಯ್ಯನವರೆಂದರೆ ಆಕೆಗೆ ಪ್ರೀತಿ. ಅವಳ ಹೋರಾಟ ನಿರಂತರವಾಗಿರುತ್ತದೆ. ನಾವು 2024ಕ್ಕೆ ಮುನ್ನಡೆಯೋಣ” ಎನ್ನುತ್ತಾ ಗದ್ಗದಿತರಾದರು.

ನಟ ದುನಿಯಾ ವಿಜಯ್ ಮಾತನಾಡಿ, ”ಗೌರಿಯಕ್ಕ ಯಾವಾಗಲೂ ಬೆನ್ನು ತಟ್ಟುತ್ತಿದ್ದವರು. ಜಿಮ್‌ನಲ್ಲಿ ಸಿಗುತ್ತಿದ್ದರು. ನನ್ನ ಸ್ವಃತ ಅಕ್ಕನನ್ನು ಕಳೆದುಕೊಂಡಿದ್ದೇನೆ” ಎಂದರು.

”ನೂರು ಗುಂಡುಗಳು ತೂರಿ ಬಂದರೂ ಗುಡುಗುಡು ಗುಡುಗುಡು ಗುಡುಗುವೆವು” ಎಂಬ ಹಾಡಿಗೆ ಎಲ್ಲರೂ ದನಿ ಸೇರಿಸಿ, ಗೌರಿಯವರ ಆಶಯಗಳನ್ನು ಕಾಡಿಟ್ಟುಕೊಳ್ಳುವ ಸಂಕಲ್ಪ ಮಾಡಿದರು.

ಈ ವೇಳೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌, ರೈತ ನಾಯಕರಾದ ರಾಕೇಶ್ ಟಿಕಾಯತ್‌, ಬಲ್ವಿಂದರ್‌ ಸಿಂಗ್, ಗೌರಿಯವರ ತಾಯಿ ಇಂದಿರಾ ಲಂಕೇಶ್, ಗೌರಿ ಒಡನಾಡಿಗಳಾದ ಸಿರಿಮನೆ ನಾಗರಾಜ್, ಡಾ.ಎಚ್.ವಿ.ವಾಸು, ಕೆ.ಎಲ್.ಅಶೋಕ್, ವಿ.ಎಸ್.ಶ್ರೀಧರ್‌, ಶಿವಸುಂದರ್‌, ಮಲ್ಲಿಗೆ ಸಿರಿಮನೆ, ದು.ಸರಸ್ವತಿ, ದೀಪು ಮೊದಲಾದವರು ಹಾಜರಿದ್ದು ಗೌರಿ ನೆನಪುಗಳನ್ನು ಮೆಲುಕು ಹಾಕಿದರು. ಹಾಡಗಾರರಾದ ಜನಾರ್ದನ್‌ (ಜೆನ್ನಿ), ಚಿಂತನ್ ವಿಕಾಸ್ ಅವರು ಪಿ.ಲಂಕೇಶ್ ಅವರ ’ಅವ್ವ’ ಕವನವನ್ನು ಹಾಡುವ ಮೂಲಕ ಗೌರಿ ಸ್ಮರಣೆಗೆ ಮೆರುಗು ತಂದರು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...