Homeಕರ್ನಾಟಕಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

ಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷಗಳು ಕಳೆದಿವೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗೌರಿ ಸಮಾಧಿಯ ಬಳಿ ಸೇರಿದ ಹೋರಾಟಗಾರರು, ಒಡನಾಡಿಗಳು ನುಡಿನಮನ ಸಲ್ಲಿಸಿದರು ಗೌರವ ನಮನ ಸಲ್ಲಿಸಿದರು.

ಈ ಗೌರವನಮನ ಕಾರ್ಯಕ್ರಮದಲ್ಲಿ ರೈತ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಸೇರಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

ಈ ವೇಳೆ ಮಾತನಾಡಿದ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಉಲ್ಲೇಖಿಸಿ, “ಸಣ್ಣದೊಂದು ನಿರಾಳತೆಯನ್ನು ಕಂಡಿದ್ದೇವೆ. ಸಣ್ಣದೊಂದು ನಿಟ್ಟುಸಿರು ಸಿಕ್ಕಿದೆ. ಗೌರಿಯವರ ಎದೆಯ ಮೇಲಿನ ಚಪ್ಪಡಿಯ ಭಾರ ಸ್ವಲ್ಪ ಕಡಿಮೆಯಾಗಿದೆ. ನಮ್ಮ ಕುತ್ತಿಗೆಯ ಮೇಲೆ ಕೂತಿದ್ದ ದುಸ್ವಪ್ನ ಮತ್ತು ದುರಾಡಳಿತವನ್ನು ಸ್ವಲ್ಪ ಮಟ್ಟಿಗೆ ಸರಿಸಿದ್ದೇವೆ” ಎಂದು ಬಣ್ಣಿಸಿದರು.

”ಹಲವು ಪರ್ಯಾಯ ಸಂಸ್ಥೆಗಳು ಚಿಗುರೊಡೆದಿವೆ. ಗೌರಿಯ ಕುಟುಂಬ ವಿಶಾಲವಾಗುತ್ತಿದೆ. ಎಲ್ಲ ಕಡೆ ಇರುವ ಜೀವಪರ ಕೊಂಡಿಗಳು ಬೆಸೆಯುತ್ತಿವೆ. ಗುರಿಯ ಜೊತೆ ಸಾಗುತ್ತಿದ್ದೇವೆ. 2024ಕ್ಕೆ ನಮ್ಮ ಜವಾಬ್ದಾರಿ ಹೆಚ್ಚಿದೆ” ಎಂದು ಎಚ್ಚರಿಸಿದರು.

ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ”ಗೌರಿಯಕ್ಕ ನಮಗೆಲ್ಲ ಒಂದು ಮಾದರಿ ಮತ್ತು ಅನುಕರಣೀಯ ವ್ಯಕ್ತಿತ್ವ. ಅವರು ಅಂದು ಹೇಳಿದ ಎಲ್ಲ ಮಾತುಗಳು ಇಂದು ಸತ್ಯವಾಗುತ್ತಿವೆ. ಮನೆಯ ಹಿರಿಯಕ್ಕನನ್ನು ಕಳೆದುಕೊಂಡಿದ್ದೇವೆ” ಎಂದು ಗೌರಿಯವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇನ್ನು ಗೌರಿಯವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ”ಗೌರಿ ಕುಟುಂಬ ಬೆಳೆಯುತ್ತಿದೆ. ಇಂದು ಅವಳು ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು. ವೈಯಕ್ತಿಕವಾಗಿ ಸಿದ್ದರಾಮಯ್ಯನವರೆಂದರೆ ಆಕೆಗೆ ಪ್ರೀತಿ. ಅವಳ ಹೋರಾಟ ನಿರಂತರವಾಗಿರುತ್ತದೆ. ನಾವು 2024ಕ್ಕೆ ಮುನ್ನಡೆಯೋಣ” ಎನ್ನುತ್ತಾ ಗದ್ಗದಿತರಾದರು.

ನಟ ದುನಿಯಾ ವಿಜಯ್ ಮಾತನಾಡಿ, ”ಗೌರಿಯಕ್ಕ ಯಾವಾಗಲೂ ಬೆನ್ನು ತಟ್ಟುತ್ತಿದ್ದವರು. ಜಿಮ್‌ನಲ್ಲಿ ಸಿಗುತ್ತಿದ್ದರು. ನನ್ನ ಸ್ವಃತ ಅಕ್ಕನನ್ನು ಕಳೆದುಕೊಂಡಿದ್ದೇನೆ” ಎಂದರು.

”ನೂರು ಗುಂಡುಗಳು ತೂರಿ ಬಂದರೂ ಗುಡುಗುಡು ಗುಡುಗುಡು ಗುಡುಗುವೆವು” ಎಂಬ ಹಾಡಿಗೆ ಎಲ್ಲರೂ ದನಿ ಸೇರಿಸಿ, ಗೌರಿಯವರ ಆಶಯಗಳನ್ನು ಕಾಡಿಟ್ಟುಕೊಳ್ಳುವ ಸಂಕಲ್ಪ ಮಾಡಿದರು.

ಈ ವೇಳೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌, ರೈತ ನಾಯಕರಾದ ರಾಕೇಶ್ ಟಿಕಾಯತ್‌, ಬಲ್ವಿಂದರ್‌ ಸಿಂಗ್, ಗೌರಿಯವರ ತಾಯಿ ಇಂದಿರಾ ಲಂಕೇಶ್, ಗೌರಿ ಒಡನಾಡಿಗಳಾದ ಸಿರಿಮನೆ ನಾಗರಾಜ್, ಡಾ.ಎಚ್.ವಿ.ವಾಸು, ಕೆ.ಎಲ್.ಅಶೋಕ್, ವಿ.ಎಸ್.ಶ್ರೀಧರ್‌, ಶಿವಸುಂದರ್‌, ಮಲ್ಲಿಗೆ ಸಿರಿಮನೆ, ದು.ಸರಸ್ವತಿ, ದೀಪು ಮೊದಲಾದವರು ಹಾಜರಿದ್ದು ಗೌರಿ ನೆನಪುಗಳನ್ನು ಮೆಲುಕು ಹಾಕಿದರು. ಹಾಡಗಾರರಾದ ಜನಾರ್ದನ್‌ (ಜೆನ್ನಿ), ಚಿಂತನ್ ವಿಕಾಸ್ ಅವರು ಪಿ.ಲಂಕೇಶ್ ಅವರ ’ಅವ್ವ’ ಕವನವನ್ನು ಹಾಡುವ ಮೂಲಕ ಗೌರಿ ಸ್ಮರಣೆಗೆ ಮೆರುಗು ತಂದರು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...