Homeಕರ್ನಾಟಕಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

ಗೌರಿ ಲಂಕೇಶ್ ಹತ್ಯೆಯ ಕರಾಳ ದಿನಕ್ಕೆ 6 ವರ್ಷ: ಹೋರಾಟಗಾರರು, ಒಡನಾಡಿಗಳಿಂದ ನುಡಿನಮನ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷಗಳು ಕಳೆದಿವೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗೌರಿ ಸಮಾಧಿಯ ಬಳಿ ಸೇರಿದ ಹೋರಾಟಗಾರರು, ಒಡನಾಡಿಗಳು ನುಡಿನಮನ ಸಲ್ಲಿಸಿದರು ಗೌರವ ನಮನ ಸಲ್ಲಿಸಿದರು.

ಈ ಗೌರವನಮನ ಕಾರ್ಯಕ್ರಮದಲ್ಲಿ ರೈತ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಸೇರಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

ಈ ವೇಳೆ ಮಾತನಾಡಿದ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಉಲ್ಲೇಖಿಸಿ, “ಸಣ್ಣದೊಂದು ನಿರಾಳತೆಯನ್ನು ಕಂಡಿದ್ದೇವೆ. ಸಣ್ಣದೊಂದು ನಿಟ್ಟುಸಿರು ಸಿಕ್ಕಿದೆ. ಗೌರಿಯವರ ಎದೆಯ ಮೇಲಿನ ಚಪ್ಪಡಿಯ ಭಾರ ಸ್ವಲ್ಪ ಕಡಿಮೆಯಾಗಿದೆ. ನಮ್ಮ ಕುತ್ತಿಗೆಯ ಮೇಲೆ ಕೂತಿದ್ದ ದುಸ್ವಪ್ನ ಮತ್ತು ದುರಾಡಳಿತವನ್ನು ಸ್ವಲ್ಪ ಮಟ್ಟಿಗೆ ಸರಿಸಿದ್ದೇವೆ” ಎಂದು ಬಣ್ಣಿಸಿದರು.

”ಹಲವು ಪರ್ಯಾಯ ಸಂಸ್ಥೆಗಳು ಚಿಗುರೊಡೆದಿವೆ. ಗೌರಿಯ ಕುಟುಂಬ ವಿಶಾಲವಾಗುತ್ತಿದೆ. ಎಲ್ಲ ಕಡೆ ಇರುವ ಜೀವಪರ ಕೊಂಡಿಗಳು ಬೆಸೆಯುತ್ತಿವೆ. ಗುರಿಯ ಜೊತೆ ಸಾಗುತ್ತಿದ್ದೇವೆ. 2024ಕ್ಕೆ ನಮ್ಮ ಜವಾಬ್ದಾರಿ ಹೆಚ್ಚಿದೆ” ಎಂದು ಎಚ್ಚರಿಸಿದರು.

ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ”ಗೌರಿಯಕ್ಕ ನಮಗೆಲ್ಲ ಒಂದು ಮಾದರಿ ಮತ್ತು ಅನುಕರಣೀಯ ವ್ಯಕ್ತಿತ್ವ. ಅವರು ಅಂದು ಹೇಳಿದ ಎಲ್ಲ ಮಾತುಗಳು ಇಂದು ಸತ್ಯವಾಗುತ್ತಿವೆ. ಮನೆಯ ಹಿರಿಯಕ್ಕನನ್ನು ಕಳೆದುಕೊಂಡಿದ್ದೇವೆ” ಎಂದು ಗೌರಿಯವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇನ್ನು ಗೌರಿಯವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ”ಗೌರಿ ಕುಟುಂಬ ಬೆಳೆಯುತ್ತಿದೆ. ಇಂದು ಅವಳು ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು. ವೈಯಕ್ತಿಕವಾಗಿ ಸಿದ್ದರಾಮಯ್ಯನವರೆಂದರೆ ಆಕೆಗೆ ಪ್ರೀತಿ. ಅವಳ ಹೋರಾಟ ನಿರಂತರವಾಗಿರುತ್ತದೆ. ನಾವು 2024ಕ್ಕೆ ಮುನ್ನಡೆಯೋಣ” ಎನ್ನುತ್ತಾ ಗದ್ಗದಿತರಾದರು.

ನಟ ದುನಿಯಾ ವಿಜಯ್ ಮಾತನಾಡಿ, ”ಗೌರಿಯಕ್ಕ ಯಾವಾಗಲೂ ಬೆನ್ನು ತಟ್ಟುತ್ತಿದ್ದವರು. ಜಿಮ್‌ನಲ್ಲಿ ಸಿಗುತ್ತಿದ್ದರು. ನನ್ನ ಸ್ವಃತ ಅಕ್ಕನನ್ನು ಕಳೆದುಕೊಂಡಿದ್ದೇನೆ” ಎಂದರು.

”ನೂರು ಗುಂಡುಗಳು ತೂರಿ ಬಂದರೂ ಗುಡುಗುಡು ಗುಡುಗುಡು ಗುಡುಗುವೆವು” ಎಂಬ ಹಾಡಿಗೆ ಎಲ್ಲರೂ ದನಿ ಸೇರಿಸಿ, ಗೌರಿಯವರ ಆಶಯಗಳನ್ನು ಕಾಡಿಟ್ಟುಕೊಳ್ಳುವ ಸಂಕಲ್ಪ ಮಾಡಿದರು.

ಈ ವೇಳೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌, ರೈತ ನಾಯಕರಾದ ರಾಕೇಶ್ ಟಿಕಾಯತ್‌, ಬಲ್ವಿಂದರ್‌ ಸಿಂಗ್, ಗೌರಿಯವರ ತಾಯಿ ಇಂದಿರಾ ಲಂಕೇಶ್, ಗೌರಿ ಒಡನಾಡಿಗಳಾದ ಸಿರಿಮನೆ ನಾಗರಾಜ್, ಡಾ.ಎಚ್.ವಿ.ವಾಸು, ಕೆ.ಎಲ್.ಅಶೋಕ್, ವಿ.ಎಸ್.ಶ್ರೀಧರ್‌, ಶಿವಸುಂದರ್‌, ಮಲ್ಲಿಗೆ ಸಿರಿಮನೆ, ದು.ಸರಸ್ವತಿ, ದೀಪು ಮೊದಲಾದವರು ಹಾಜರಿದ್ದು ಗೌರಿ ನೆನಪುಗಳನ್ನು ಮೆಲುಕು ಹಾಕಿದರು. ಹಾಡಗಾರರಾದ ಜನಾರ್ದನ್‌ (ಜೆನ್ನಿ), ಚಿಂತನ್ ವಿಕಾಸ್ ಅವರು ಪಿ.ಲಂಕೇಶ್ ಅವರ ’ಅವ್ವ’ ಕವನವನ್ನು ಹಾಡುವ ಮೂಲಕ ಗೌರಿ ಸ್ಮರಣೆಗೆ ಮೆರುಗು ತಂದರು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...