Homeಮುಖಪುಟನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

- Advertisement -
- Advertisement -

ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್‌ ಬ್ಯಾನ್‌ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.

2016 ರ ನವೆಂಬರ್‌ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?

ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.

ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.

ಗುರ್‌‌ಗಾಂವ್‌ನ ಬ್ಯಾಂಕ್‌ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HT
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.
Image
ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.
Image
ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆ
Image
ತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರು
ತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು

 

http-%2f%2fo-aolcdn-com%2fhss%2fstorage%2fmidas%2f32d4793915fcf87be41c450381596fff%2f204583876%2f623013552

Image
ಹಣ ಬದಲಾವಣೆಗೆ ಬಂದ ವೃದ್ದೆ

ವಿಡಿಯೊಗಳು


ಅಮಾಯಕ ಜನರ ಮೇಲೆ ಲಾಠಿ ಚಾರ್ಜ್


ಬ್ಯಾಂಕಗಳಲ್ಲಿನ ಪರಿಸ್ಥಿತಿ


ಬ್ಯಾಂಕಿನ ಮುಂದೆ ಜನರ ಸರತಿ ಸಾಲು

2016 ನವೆಂಬರ್‌ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್‌ ಬ್ಯಾನ್ ಆಗಿ ಆರು ವರ್ಷಗಳಾಯಿತು!.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...