Homeಮುಖಪುಟನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

- Advertisement -
- Advertisement -

ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್‌ ಬ್ಯಾನ್‌ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.

2016 ರ ನವೆಂಬರ್‌ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?

ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.

ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.

ಗುರ್‌‌ಗಾಂವ್‌ನ ಬ್ಯಾಂಕ್‌ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HT
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.
Image
ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.
Image
ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆ
Image
ತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರು
ತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು

 

http-%2f%2fo-aolcdn-com%2fhss%2fstorage%2fmidas%2f32d4793915fcf87be41c450381596fff%2f204583876%2f623013552

Image
ಹಣ ಬದಲಾವಣೆಗೆ ಬಂದ ವೃದ್ದೆ

ವಿಡಿಯೊಗಳು


ಅಮಾಯಕ ಜನರ ಮೇಲೆ ಲಾಠಿ ಚಾರ್ಜ್


ಬ್ಯಾಂಕಗಳಲ್ಲಿನ ಪರಿಸ್ಥಿತಿ


ಬ್ಯಾಂಕಿನ ಮುಂದೆ ಜನರ ಸರತಿ ಸಾಲು

2016 ನವೆಂಬರ್‌ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್‌ ಬ್ಯಾನ್ ಆಗಿ ಆರು ವರ್ಷಗಳಾಯಿತು!.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...