ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್ ಬ್ಯಾನ್ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.
2016 ರ ನವೆಂಬರ್ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.
ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.
ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.
ಗುರ್ಗಾಂವ್ನ ಬ್ಯಾಂಕ್ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HTಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರುತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು
ಹಣ ಬದಲಾವಣೆಗೆ ಬಂದ ವೃದ್ದೆ
ವಿಡಿಯೊಗಳು
ಅಮಾಯಕ ಜನರ ಮೇಲೆ ಲಾಠಿ ಚಾರ್ಜ್
ಬ್ಯಾಂಕಗಳಲ್ಲಿನ ಪರಿಸ್ಥಿತಿ
ಬ್ಯಾಂಕಿನ ಮುಂದೆ ಜನರ ಸರತಿ ಸಾಲು
2016 ನವೆಂಬರ್ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್ ಬ್ಯಾನ್ ಆಗಿ ಆರು ವರ್ಷಗಳಾಯಿತು!.
ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ
"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...
ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...
ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್ಲೈನ್ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...
ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ.
28 ವರ್ಷ ವಯಸ್ಸಿನ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...
ಸುಪ್ರೀಂ ಕೋರ್ಟ್ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...
ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್ಆರ್ಟಿಸಿ) ಬಸ್ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...
ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್ಪಾತ್ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...
ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...
ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ