Homeಮುಖಪುಟನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

- Advertisement -
- Advertisement -

ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್‌ ಬ್ಯಾನ್‌ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.

2016 ರ ನವೆಂಬರ್‌ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?

ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.

ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.

ಗುರ್‌‌ಗಾಂವ್‌ನ ಬ್ಯಾಂಕ್‌ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HT
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.
Image
ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.
Image
ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆ
Image
ತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರು
ತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು

 

http-%2f%2fo-aolcdn-com%2fhss%2fstorage%2fmidas%2f32d4793915fcf87be41c450381596fff%2f204583876%2f623013552

Image
ಹಣ ಬದಲಾವಣೆಗೆ ಬಂದ ವೃದ್ದೆ

ವಿಡಿಯೊಗಳು


ಅಮಾಯಕ ಜನರ ಮೇಲೆ ಲಾಠಿ ಚಾರ್ಜ್


ಬ್ಯಾಂಕಗಳಲ್ಲಿನ ಪರಿಸ್ಥಿತಿ


ಬ್ಯಾಂಕಿನ ಮುಂದೆ ಜನರ ಸರತಿ ಸಾಲು

2016 ನವೆಂಬರ್‌ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್‌ ಬ್ಯಾನ್ ಆಗಿ ಆರು ವರ್ಷಗಳಾಯಿತು!.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...