Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...