Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...