Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...