Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...