Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...