Homeಮುಖಪುಟನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

- Advertisement -
- Advertisement -

ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶಾಸನಬದ್ಧವಾಗಿ ಖಾತರಿಗೊಳಿಸಬೇಕು ಎಂದು ಒತ್ತಾಯಿಸಿ ಇದೇ ನವೆಂಬರ್ 29ರಂದು ನಡೆಯುತ್ತಿರುವ ಸಂಸತ್ ಚಲೋನಲ್ಲಿ ಒಟ್ಟು 60 ಟ್ಯ್ರಾಕ್ಟರ್‌ಗಳು ಸಂಸತ್ತಿಗೆ ತೆರಳಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಗಾಜಿಯಾಬಾದ್‌ನಲ್ಲಿ ಘೋಷಿಸಿದ್ದಾರೆ.

“ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳು ಸಂಸತ್ತಿಗೆ ಮೆರವಣಿಗೆ ನಡೆಸಲಿವೆ. ಸರ್ಕಾರ ತೆರೆದಿರುವ ರಸ್ತೆಗಳಲ್ಲಿ ಟ್ರ್ಯಾಕ್ಟರ್‌ಗಳು ಹೋಗುತ್ತವೆ. ನಾವು ರಸ್ತೆಗಳನ್ನು ನಿರ್ಬಂಧಿಸಿದ್ದೇವೆ ಎಂದು ಅವರು ಆರೋಪಿಸಿದ್ದರು. ನಾವು ರಸ್ತೆಗಳನ್ನು ನಿರ್ಬಂಧಿಸಿಲ್ಲ. ರಸ್ತೆ ತಡೆ ನಮ್ಮ ಚಳವಳಿಯಲ್ಲ. ನಮ್ಮ ಆಂದೋಲನವು ಸರ್ಕಾರದೊಂದಿಗೆ ಮಾತನಾಡುವುದಾಗಿದೆ. ನಾವು ನೇರವಾಗಿ ಸಂಸತ್ತಿಗೆ ಹೋಗುತ್ತೇವೆ’ ಎಂದು ಅವರು ಎಎನ್ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದು, ಈ ಮೂರು ಕೃಷಿ ಕಾನೂನುಗಳ ರದ್ದತಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡುವ ಸಾಧ್ಯತೆ ಇದೆ. ಆದರೆ ಅಷ್ಟಕ್ಕೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಾಯ್ದೆ ಸಂಸತ್ತಿನಲ್ಲಿ ರದ್ದಾಗುವುದರ ಜೊತೆಗೆ ಎಂಎಸ್‌ಪಿ ಖಾತ್ರಿ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾವು ಮಳೆಗಾಲದ ಅಧಿವೇಶನದ ಸಂದರ್ಭದಲ್ಲಿ ಅದಕ್ಕೆ ಪ್ರತಿಯಾಗಿ ಜಂತರ್‌ ಮಂತರ್‌ನಲ್ಲಿ ಸೇರಿ ಕಿಸಾನ್ ಸಂಸತ್ತು ನಡೆಸಿದೆವು. ಆದರೆ ಕಳೆದ ಬಾರಿ ಹೋದಂತೆ ಈ ಬಾರಿ 200 ಜನರು ಇರುವುದಿಲ್ಲ. ಬದಲಿಗೆ, ಸಾವಿರ ಜನರು ಸಂಸತ್ತಿಗೆ ತೆರಳಲಿದ್ದಾರೆ ಎಂದು ಟಿಕಾಯತ್ ವಿವರಿಸಿದ್ದಾರೆ.

‘ಎಂಎಸ್‌ಪಿ ಕುರಿತು ಸರ್ಕಾರದ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ. ಅದರೊಂದಿಗೆ ಕಳೆದ ಒಂದು ವರ್ಷದಲ್ಲಿ ಸಂಭವಿಸಿದ ಘಟನೆಗಳು, 750 ರೈತರ ಸಾವು… ಇವೆಲ್ಲದರ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

2020 ನವೆಂಬರ್ ತಿಂಗಳಿನಲ್ಲಿ ಆರಂಭವಾದ ರೈತ ಹೋರಾಟ ಹಲವು ಏಳು ಬೀಳುಗಳ ನಡುವೆಯೂ ಯಶಸ್ವಿ ಕಂಡಿದೆ. ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಸತ್ತಿನಲ್ಲಿ ಕಾಯ್ದೆಗಳು ಅಧಿಕೃತವಾಗಿ ರದ್ಧಾಗುವವರೆಗೂ ಕಾಯುವುದಾಗಿ ತಿಳಿಸಿತ್ತು. ಅದರೊಂದಿಗೆ ಇನ್ನು ಮುಖ್ಯ ಬೇಡಿಕೆಗಳಾಗಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು, ವಿದ್ಯುತ್ ಕಾಯ್ದೆಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಪೂರೈಸುವವರೆಗೂ ಹೋರಾಟವನ್ನು ನಡೆಸುವುದಾಗಿ ತಿಳಿಸಿತ್ತು.

ಸಂಸತ್ತಿನ ಚಳಿಗಾಲದ ಅಧಿವೇಶನವು ನವೆಂಬರ್ 29 ರಂದು ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 23 ರವರೆಗೆ ಮುಂದುವರೆಯುವ ನಿರೀಕ್ಷೆಯಿದೆ.


ಇದನ್ನೂ ಓದಿ: ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...