Homeಮುಖಪುಟ60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

- Advertisement -
- Advertisement -

ಎಬಿವಿಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುಬ್ಬಯ್ಯ ಷಣ್ಮುಗಂ ಅವರನ್ನು 60 ವರ್ಷದ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಚೆನ್ನೈ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನೆರೆ ಮನೆಯ ಮಹಿಳೆಯ ಬಾಗಿಲಿನ ಬಳಿ ಮೂತ್ರ ವಿಸರ್ಜನೆ ಮತ್ತು ಮನೆಯ ಹೊರಗೆ ಕಸ ಎಸೆಯುವ ಮೂಲಕ ಕಿರುಕುಳ ನೀಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣದ ದಾಖಲಾಗಿತ್ತು.

2020 ರ ಜುಲೈ ತಿಂಗಳಲ್ಲಿ ಸುಬ್ಬಯ್ಯ ಮತ್ತು ಸಂತ್ರಸ್ತೆಯ ನಡುವೆ ಪಾರ್ಕಿಂಗ್ ಸ್ಥಳದ ಬಗ್ಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಆಪಾದಿತ ಘಟನೆ ನಡೆದಿತ್ತು. ಆ ಸಮಯದಲ್ಲಿ ಕಿಲ್ಪಾಕ್ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥರೂ ಆಗಿದ್ದ ಸುಬ್ಬಯ್ಯ ಅವರ ಮೇಲೆ 60 ವರ್ಷದ ಸಂತ್ರಸ್ತೆ ಮತ್ತು ಅವರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಆದಂಬಾಕ್ಕಂ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ದೂರು ಸ್ವೀಕರಿಸಿದರೂ ಪೊಲೀಸರು ಅವರ ವಿರುದ್ದ ಪ್ರಕರಣದ ದಾಖಲಿಸಿರಲಿಲ್ಲ. ನಂತರ ಸಾರ್ವಜನಿಕರ ಆಕ್ರೋಶದ ನಂತರ ಸುಮಾರು ಎರಡು ವಾರಗಳ ನಂತರ ಎಫ್‌ಐಆರ್‌ ದಾಖಲಾಗಿತ್ತು. ಸುಬ್ಬಯ್ಯನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 271 (ಕ್ವಾರಂಟೈನ್ ನಿಯಮಕ್ಕೆ ಅವಿಧೇಯತೆ) ಮತ್ತು ಸೆಕ್ಷನ್ 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಕುಟುಂಬದವರು ದೂರು ಹಿಂಪಡೆಯುವುದಾಗಿ ಹೇಳಿದ್ದಾರೆ. ಮಹಿಳೆಯ ಕುಟುಂಬವು ಈ ವಿವಾದವನ್ನು ಮುಂದುವರಿಸದಂತೆ ನೆರೆಹೊರೆಯವರು ಒತ್ತಡ ಹೇರಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ದೂರನ್ನು ಹಿಂಪಡೆದರೂ ಎಫ್‌ಐಆರ್ ದಾಖಲಿಸಿದ ನಂತರ ತನಿಖೆಯನ್ನು ಮುಂದುವರಿಸಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಒಬ್ಬಂಟಿಯಾಗಿ ವಾಸಿಸುತ್ತಿದ್ದ ವಿಧವೆ ಮಹಿಳೆಯು 2020 ಜುಲೈನಲ್ಲಿ, ತನ್ನ ಮನೆಯ ಬಾಗಿಲಿನ ಹೊರಗೆ ಕಸವನ್ನು ಬಿಸಾಡಿರುವುದನ್ನು ಕಂಡಿದ್ದರು. ಅದಕ್ಕಿಂತಲೂ ತುಸು ದಿನಗಳ ಮುಂಚೆ ಅವರು ವಾಹನ ಪಾರ್ಕಿಂಗ್‌ ಸಂಬಂಧಿಸಿದಂತೆ ಜಗಳವಾಡಿದ ಸುಬ್ಬಯ್ಯ ಎಂಬಾತನೇ ಈ ಕೃತ್ಯ ಮಾಡಿದ್ದಾನೆ ಎಂದು ಅನುಮಾನಗೊಂಡು ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು. ಅದರಲ್ಲಿ ವ್ಯಕ್ತಿಯೊಬ್ಬ ಆಕೆಯ ಮನೆ ಬಾಗಿಲಿನ ಬಳಿ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿಡಿಯೋದಲ್ಲಿ ಇದರುವುದು ಸುಬ್ಬಯ್ಯ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದಾರೆ. ಆದರೆ ಸುಬ್ಬಯ್ಯ ಅದನ್ನು ನಿರಾಕರಿಸಿದ್ದು, ವಿಡಿಯೊವನ್ನು ತಿರುಚಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಎಬಿವಿಪಿ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಒತ್ತಾಯಿಸುವುದರೊಂದಿಗೆ ಪ್ರಕರಣವು ರಾಜಕೀಯಕ್ಕೆ ತಿರುಗಿತ್ತು. ಸುಬ್ಬಯ್ಯ ಅವರ ರಾಜಕೀಯ ಹಿನ್ನಲೆಯಿಂದಾಗಿ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ನ್ಯೂಸ್ ಮಿನಿ‌ಟ್‌ ವರದಿ ಮಾಡಿದೆ.

ಸಂತ್ರಸ್ತೆಯ ಬಾಗಿಲಿನ ಹೊರಗೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

ಪ್ರಕರಣ ನಡೆದು ಕೆಲವು ತಿಂಗಳುಗಳ ನಂತರ, ಅಕ್ಟೋಬರ್ 2020 ರಲ್ಲಿ, ಸುಬ್ಬಯ್ಯ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮಧುರೈನ ಮಂಡಳಿಯ ಸದಸ್ಯರಾಗಿ ನೇಮಿಸಲಾಗಿತ್ತು. ಆದರೆ ಈ ಕ್ರಮವನ್ನು ವ್ಯಾಪಕವಾಗಿ ಖಂಡಿಸಲಾತಿತ್ತು.

ಈ ನಡುವೆ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸರ್ಕಾರಿ ನೌಕರರ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಿಲ್ಪಾಕ್ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿದ್ದ ಅವರನ್ನು ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಸದಸ್ಯರಿಗೆ ಸಹಾಯ ಮಾಡಿದ್ದಕ್ಕಾಗಿ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...