Homeಮುಖಪುಟಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

- Advertisement -
- Advertisement -

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ ಸುಮಾರು 600 ಕುಟುಂಬಗಳ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಗೋಲ್ಪಾರ ಉಪ ಆಯುಕ್ತ ಪ್ರೊದೀಪ್ ತಿಮುಂಗ್ ಮಾಧ್ಯಮಗಳೊಂದಿಗೆ ಮಾತನಾಡಿ, ತೆರವು ಕಾರ್ಯಾಚರಣೆ ಶಾಂತಿಯುತವಾಗಿ ಮುಂದುವರೆದಿದ್ದು, ಎರಡು ವಾರಗಳ ಹಿಂದೆಯೇ ನೋಟಿಸ್‌ಗಳನ್ನು ನೀಡಿ, ನಿವಾಸಿಗಳು ಪ್ರದೇಶವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

1,140 ಬಿಘಾ ಭೂಮಿಯನ್ನು 580 ಕುಟುಂಬಗಳು ಅತಿಕ್ರಮಣ ಮಾಡಿಕೊಂಡಿದ್ದವು. ಅವರಲ್ಲಿ ಸುಮಾರು 70% ಕುಟುಂಬಗಳು ನೋಟಿಸ್ ಪಡೆದ ನಂತರ ಈಗಾಗಲೇ ಖಾಲಿ ಮಾಡಿದ್ದಾರೆ ಮತ್ತು ಉಳಿದವರು ಸ್ಥಳಾಂತರಗೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ತಿಮುಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.

ತೆರವು ಕಾರ್ಯಾಚರಣೆಗೆ ದೊಡ್ಡ ಮಟ್ಟದ ಭದ್ರತಾ ಸಿಬ್ಬಂದಿಯ ತುಕಡಿಯನ್ನು ನಿಯೋಜಿಸಲಾಗಿದೆ. ಬುಲ್ಡೋಝರ್, ಟ್ರ್ಯಾಕ್ಟರ್ ಸೇರಿದಂತೆ ಭಾರೀ ಪ್ರಮಾಣದಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಳ್ಳಲಾಗಿದೆ. ಇಡೀ ಪ್ರದೇಶವನ್ನು ಐದು ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಒಂದರಲ್ಲಿ ಮಾತ್ರ ಪ್ರತಿರೋಧ ವರದಿಯಾಗಿದೆ. ದಿನಾಂತ್ಯದ ವೇಳೆಗೆ ಕಾರ್ಯಾಚರಣೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ತಿಮುಂಗ್ ಹೇಳಿದ್ದಾರೆ.

ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹಲವಾರು ಅರ್ಜಿಗಳನ್ನು ಈ ಹಿಂದೆ ಗುವಾಹಟಿ ಹೈಕೋರ್ಟ್ ವಿಚಾರಣೆ ನಡೆಸಿದೆ. ಹೈಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ತೆರವು ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಮುಂಗ್ ತಿಳಿಸಿದ್ದಾರೆ.

ತೆರವು ಕಾರ್ಯಾಚರಣೆಯಿಂದ ಮನೆಗಳನ್ನು ಕಳೆದುಕೊಳ್ಳಲಿರುವ ಹೆಚ್ಚಿನ ಜನರು ಬಂಗಾಳಿ ಮಾತನಾಡುವ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾಗಿ ವರದಿಯಾಗಿದೆ.

2021ರಲ್ಲಿ ಹಿಮಂತ್ ಬಿಸ್ವಾ ಶರ್ಮಾ ಅಸ್ಸಾಂ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ, ಅತಿಕ್ರಮಣ ತೆರವು ಹೆಸರಿನಲ್ಲಿ ಜನರ ಮನೆಗಳನ್ನು ಧ್ವಂಸಗೊಳಿಸುವ ಕಾರ್ಯಾಚರಣೆ ಸರಣಿಯಾಗಿ ನಡೆಯುತ್ತಿವೆ. ಈ ಕಾರ್ಯಾಚರಣೆಗಳಲ್ಲಿ ಹೆಚ್ಚಾಗಿ ಬಂಗಾಳಿ ಮಾತನಾಡುವ ಮುಸ್ಲಿಮರು ತಮ್ಮ ನೆಲೆ ಕಳೆದುಕೊಂಡಿದ್ದಾರೆ.

“ನಮ್ಮ ಆಡಳಿತದಲ್ಲಿ ಅಕ್ರಮ ಮಿಯಾಗಳು (ಮಿಯಾ ಮುಸ್ಲಿಮರು) ಶಾಂತಿ ಕಂಡುಕೊಳ್ಳಲು ಸಾಧ್ಯವಿಲ್ಲ. ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಿಎಂ ಶರ್ಮಾ ಇತ್ತೀಚೆಗೆ ಹೇಳಿದ್ದರು.

ಮೂಲತಃ ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರಿಗೆ ನಿಂದನೆಯಾಗಿ ಬಳಸಲಾಗುತ್ತಿದ್ದ ಮಿಯಾ ಎಂಬ ಪದವನ್ನು ಇತ್ತೀಚಿನ ವರ್ಷಗಳಲ್ಲಿ ಆ ಸಮುದಾಯದ ಗುರುತಾಗಿ ಮಾರ್ಪಟ್ಟಿದೆ. ಈ ಮಿಯಾ ಮುಸ್ಲಿಮರನ್ನು ಸಿಎಂ ಶರ್ಮಾ ನೇರವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂಬ ಆರೋಪಗಳಿವೆ.

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...