Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...