Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...