Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...