Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...